<p><strong>ಕೊಪ್ಪಳ:</strong> ನಗರ ಹಾಗೂ ಜಿಲ್ಲೆಯ ವಿವಿಧೆಡೆ ಬುಧವಾರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.<br /> ತಿನೈಘಾಟ್ನಿಂದ ಹೊಸಪೇಟೆ ವರೆಗಿನ ರೈಲು ಮಾರ್ಗವನ್ನು ಜೋಡಿ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿಯನು ಕೈಗೆತ್ತಿಕೊಂಡಿರುವ ಆರ್ವಿಎನ್ಎಲ್ ಸಂಸ್ಥೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿಗಳನ್ನು ನೆಡಲಾಯಿತು.<br /> <br /> ನಗರದ ರೈಲ್ವೆ ನಿಲ್ದಾಣದ ಪಕ್ಕ ರೈಲ್ವೆ ಕ್ರಾಸಿಂಗ್ ನಂ. 62ರ ಬಳಿ ಇರುವ ಸಂಸ್ಥೆಯ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಸಸಿಗಳನ್ನು ನೆಟ್ಟರು.<br /> <br /> ಆರ್ವಿಎನ್ಎಲ್ನ ಯೋಜನಾ ನಿರ್ದೇಶಕ ಎ.ಜಿ.ಪಾಟೀಲ, ವಯಂಟ್ಸ್ ಸೊಲೂಷನ್ಸ್ನ ಯೋಜನಾ ವ್ಯವಸ್ಥಾಪಕ ಬಿಆರ್ಕೆ ಶರ್ಮಾ, ಎಲ್ ಆ್ಯಂಡ್ ಟಿ ಕಂಪೆನಿಯ ಯೋಜನಾ ವ್ಯವಸ್ಥಾಪಕ ಎಂ.ಎ.ಸಾದಿಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.<br /> <br /> ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಅಂಗವಾಗಿ ದಿವಟರ ನಗರ, ಬಿ.ಟಿ.ಪಾಟೀಲ ನಗರದಲ್ಲಿರುವ ಉದ್ಯಾನವನಗಳು, ಘನತ್ಯಾಜ್ಯ ವಸ್ತು ವಿಲೇವಾರಿ ಘಟಕದ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.<br /> <br /> ಪೌರಾಯುಕ್ತೆ ಬಿ.ಎಂ.ಅಶ್ವಿನಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ಆನಂದ, ನಗರಸಭೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆರ್.ಆರ್.ಪಾಟೀಲ, ವ್ಯವಸ್ಥಾಪಕ ಬಾಬು, ಕಿರಿಯ ಎಂಜಿನಿಯರ್ ಎಸ್.ಬಿ. ಮರಿಗೌಡ್ರು, ಹಿರಿಯ ಆರೋಗ್ಯ ನಿರೀಕ್ಷಕಿ ಜಯಶೀಲ, ಮಂಜುಳಾಬಾಯಿ, ಎನ್.ಎಚ್.ವಿರೂಪಾಕ್ಷಪ್ಪ ಉಪಸ್ಥಿತರಿದ್ದರು.<br /> <br /> ಹಿರೇಬಿಡನಾಳ: ಯಲಬುರ್ಗಾ ತಾಲ್ಲೂಕಿನ ಹಿರೇಬಿಡನಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಬುಧವಾರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.<br /> <br /> ಶಾಲೆಯ ಆವರಣದಲ್ಲಿ ಸಸಿಗಳನ್ನು ನೆಡಲಾಯಿತಲ್ಲದೇ, ಪರಿಸರ ಸಂರಕ್ಷಣೆಯ ಮಹತ್ವ ಕುರಿತಂತೆ ಮಕ್ಕಳಿಗೆ ಮಾಹಿತಿ ನೀಡಲಾಯಿತು. ಶಿಕ್ಷಕರಾದ ರಾಜು ತೇರದಾಳ, ಫಾಲಾಕ್ಷಾಚಾರ್ಯ ಬಡಿಗೇರ, ಶೋಭಾ ರಾಜೂರು ಉಪಸ್ಥಿತರಿದ್ದರು.<br /> <br /> ಪ್ರಭಾರ ಮುಖ್ಯ ಶಿಕ್ಷಕ ವಿದ್ಯಾಸಾಗರ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಅಂಜನಾದೇವಿ ಪ್ರಾರ್ಥನಾ ಗೀತೆ ಹಾಡಿದರು. ಶಿಕ್ಷಕ ಸಿದ್ಲಿಂಗಸ್ವಾಮಿ ನಿರೂಪಿಸಿದರು. ಮಹಿಪತಿ ಕಟ್ಟಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ನಗರ ಹಾಗೂ ಜಿಲ್ಲೆಯ ವಿವಿಧೆಡೆ ಬುಧವಾರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.<br /> ತಿನೈಘಾಟ್ನಿಂದ ಹೊಸಪೇಟೆ ವರೆಗಿನ ರೈಲು ಮಾರ್ಗವನ್ನು ಜೋಡಿ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿಯನು ಕೈಗೆತ್ತಿಕೊಂಡಿರುವ ಆರ್ವಿಎನ್ಎಲ್ ಸಂಸ್ಥೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿಗಳನ್ನು ನೆಡಲಾಯಿತು.<br /> <br /> ನಗರದ ರೈಲ್ವೆ ನಿಲ್ದಾಣದ ಪಕ್ಕ ರೈಲ್ವೆ ಕ್ರಾಸಿಂಗ್ ನಂ. 62ರ ಬಳಿ ಇರುವ ಸಂಸ್ಥೆಯ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಸಸಿಗಳನ್ನು ನೆಟ್ಟರು.<br /> <br /> ಆರ್ವಿಎನ್ಎಲ್ನ ಯೋಜನಾ ನಿರ್ದೇಶಕ ಎ.ಜಿ.ಪಾಟೀಲ, ವಯಂಟ್ಸ್ ಸೊಲೂಷನ್ಸ್ನ ಯೋಜನಾ ವ್ಯವಸ್ಥಾಪಕ ಬಿಆರ್ಕೆ ಶರ್ಮಾ, ಎಲ್ ಆ್ಯಂಡ್ ಟಿ ಕಂಪೆನಿಯ ಯೋಜನಾ ವ್ಯವಸ್ಥಾಪಕ ಎಂ.ಎ.ಸಾದಿಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.<br /> <br /> ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಅಂಗವಾಗಿ ದಿವಟರ ನಗರ, ಬಿ.ಟಿ.ಪಾಟೀಲ ನಗರದಲ್ಲಿರುವ ಉದ್ಯಾನವನಗಳು, ಘನತ್ಯಾಜ್ಯ ವಸ್ತು ವಿಲೇವಾರಿ ಘಟಕದ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.<br /> <br /> ಪೌರಾಯುಕ್ತೆ ಬಿ.ಎಂ.ಅಶ್ವಿನಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ಆನಂದ, ನಗರಸಭೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆರ್.ಆರ್.ಪಾಟೀಲ, ವ್ಯವಸ್ಥಾಪಕ ಬಾಬು, ಕಿರಿಯ ಎಂಜಿನಿಯರ್ ಎಸ್.ಬಿ. ಮರಿಗೌಡ್ರು, ಹಿರಿಯ ಆರೋಗ್ಯ ನಿರೀಕ್ಷಕಿ ಜಯಶೀಲ, ಮಂಜುಳಾಬಾಯಿ, ಎನ್.ಎಚ್.ವಿರೂಪಾಕ್ಷಪ್ಪ ಉಪಸ್ಥಿತರಿದ್ದರು.<br /> <br /> ಹಿರೇಬಿಡನಾಳ: ಯಲಬುರ್ಗಾ ತಾಲ್ಲೂಕಿನ ಹಿರೇಬಿಡನಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಬುಧವಾರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.<br /> <br /> ಶಾಲೆಯ ಆವರಣದಲ್ಲಿ ಸಸಿಗಳನ್ನು ನೆಡಲಾಯಿತಲ್ಲದೇ, ಪರಿಸರ ಸಂರಕ್ಷಣೆಯ ಮಹತ್ವ ಕುರಿತಂತೆ ಮಕ್ಕಳಿಗೆ ಮಾಹಿತಿ ನೀಡಲಾಯಿತು. ಶಿಕ್ಷಕರಾದ ರಾಜು ತೇರದಾಳ, ಫಾಲಾಕ್ಷಾಚಾರ್ಯ ಬಡಿಗೇರ, ಶೋಭಾ ರಾಜೂರು ಉಪಸ್ಥಿತರಿದ್ದರು.<br /> <br /> ಪ್ರಭಾರ ಮುಖ್ಯ ಶಿಕ್ಷಕ ವಿದ್ಯಾಸಾಗರ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಅಂಜನಾದೇವಿ ಪ್ರಾರ್ಥನಾ ಗೀತೆ ಹಾಡಿದರು. ಶಿಕ್ಷಕ ಸಿದ್ಲಿಂಗಸ್ವಾಮಿ ನಿರೂಪಿಸಿದರು. ಮಹಿಪತಿ ಕಟ್ಟಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>