<p><strong>ಕೊಪ್ಪಳ: </strong>ನಗರದಲ್ಲಿರುವ ಸ್ವಾಮಿ ವಿವೇಕಾನಂದ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ಶುಲ್ಕ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಸೋಮವಾರ ಸ್ವಾಮಿ ವಿವೇಕಾನಂದ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ಪಾಲಕರ ಹೋರಾಟ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.<br /> <br /> ಶುಲ್ಕ ಹೆಚ್ಚಳವನ್ನು ಕೈಬಿಡಬೇಕು ಎಂಬುದು ಸೇರಿದಂತೆ ಒಟ್ಟು ಆರು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಸದಸ್ಯರು ಮನವಿ ಮಾಡಿದರು.<br /> <br /> ಶಾಲೆಯಲ್ಲಿ ಶಿಕ್ಷಣದ ಗುಣಮಟ್ಟವನ್ನು ಕಾಪಾಡಲು ಕ್ರಮ ಕೈಗೊಳ್ಳಬೇಕು. ಸರ್ಕಾರದ ನಿಯಮಗಳ ಪ್ರಕಾರ ಅರ್ಹ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು ಹಾಗೂ ಪ್ರತಿ ತರಗತಿಯಲ್ಲಿ ನಿಗದಿತ ಸಂಖ್ಯೆಯ ಮಕ್ಕಳಿಗೆ ಪ್ರವೇಶ ನೀಡಬೇಕು ಎಂದು ಒತ್ತಾಯಿಸಿದರು.<br /> <br /> ಶಾಲೆಯ ಆವರಣದಲ್ಲಿರುವ ಕ್ಲಬ್ನ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು, ಕುಡಿಯುವ ನೀರಿನ ವ್ಯವಸ್ಥೆ, ಸಮತಟ್ಟಾದ ಮೈದಾನ ನಿರ್ಮಾಣ, ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು, ಪ್ರತಿ ಎರಡು ತಿಂಗಳಿಗೊಮ್ಮೆ ಪಾಲಕರ ಸಭೆ ಕರೆದು ಶಿಕ್ಷಣದ ಗುಣಮಟ್ಟ, ಶಾಲೆಯ ಅಭಿವೃದ್ಧಿ ಹಾಗೂ ಕುಂದು-ಕೊರತೆ ಬಗಗೆ ಚರ್ಚಿಸಬೇಕು ಎಂದೂ ಒತ್ತಾಯಿಸಿದರು.<br /> <br /> ಸಮಿತಿಯ ಬಸವರಾಜ ಶೀಲವಂತರ, ಪ್ರಕಾಶ ಕಂದಕೂರು, ಜಿ.ಎಸ್.ಗೋನಾಳ, ರಾಮಣ್ಣ ಕಂದಾರಿ, ನನ್ನೂಸಾಬ ನೀಲಿ, ಅಂಬುಜಾ ಪಾಟೀಲ, ರಮೇಶ ಮೇಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ: </strong>ನಗರದಲ್ಲಿರುವ ಸ್ವಾಮಿ ವಿವೇಕಾನಂದ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ಶುಲ್ಕ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಸೋಮವಾರ ಸ್ವಾಮಿ ವಿವೇಕಾನಂದ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ಪಾಲಕರ ಹೋರಾಟ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.<br /> <br /> ಶುಲ್ಕ ಹೆಚ್ಚಳವನ್ನು ಕೈಬಿಡಬೇಕು ಎಂಬುದು ಸೇರಿದಂತೆ ಒಟ್ಟು ಆರು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಸದಸ್ಯರು ಮನವಿ ಮಾಡಿದರು.<br /> <br /> ಶಾಲೆಯಲ್ಲಿ ಶಿಕ್ಷಣದ ಗುಣಮಟ್ಟವನ್ನು ಕಾಪಾಡಲು ಕ್ರಮ ಕೈಗೊಳ್ಳಬೇಕು. ಸರ್ಕಾರದ ನಿಯಮಗಳ ಪ್ರಕಾರ ಅರ್ಹ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು ಹಾಗೂ ಪ್ರತಿ ತರಗತಿಯಲ್ಲಿ ನಿಗದಿತ ಸಂಖ್ಯೆಯ ಮಕ್ಕಳಿಗೆ ಪ್ರವೇಶ ನೀಡಬೇಕು ಎಂದು ಒತ್ತಾಯಿಸಿದರು.<br /> <br /> ಶಾಲೆಯ ಆವರಣದಲ್ಲಿರುವ ಕ್ಲಬ್ನ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು, ಕುಡಿಯುವ ನೀರಿನ ವ್ಯವಸ್ಥೆ, ಸಮತಟ್ಟಾದ ಮೈದಾನ ನಿರ್ಮಾಣ, ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು, ಪ್ರತಿ ಎರಡು ತಿಂಗಳಿಗೊಮ್ಮೆ ಪಾಲಕರ ಸಭೆ ಕರೆದು ಶಿಕ್ಷಣದ ಗುಣಮಟ್ಟ, ಶಾಲೆಯ ಅಭಿವೃದ್ಧಿ ಹಾಗೂ ಕುಂದು-ಕೊರತೆ ಬಗಗೆ ಚರ್ಚಿಸಬೇಕು ಎಂದೂ ಒತ್ತಾಯಿಸಿದರು.<br /> <br /> ಸಮಿತಿಯ ಬಸವರಾಜ ಶೀಲವಂತರ, ಪ್ರಕಾಶ ಕಂದಕೂರು, ಜಿ.ಎಸ್.ಗೋನಾಳ, ರಾಮಣ್ಣ ಕಂದಾರಿ, ನನ್ನೂಸಾಬ ನೀಲಿ, ಅಂಬುಜಾ ಪಾಟೀಲ, ರಮೇಶ ಮೇಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>