<p><strong>ಕೊಪ್ಪಳ</strong>: ಜಿಲ್ಲೆಯಲ್ಲಿ ಇತ್ತೀಚೆಗೆ ಶಿಷ್ಟ ಸಾಹಿತ್ಯ ಬೆಳೆಯುತ್ತಿದೆ. ಜಿಲ್ಲೆಯ ಸಾಹಿತ್ಯಿಕ ಕೊಡುಗೆ ಗಮನಾರ್ಹ ಎಂದು ಹಿರಿಯ ಸಾಹಿತಿ ಮಹಾಂತೇಶ ಮಲ್ಲನಗೌಡರ ಹೇಳಿದರು.<br /> <br /> ಕನ್ನಡನೆಟ್ ಡಾಟ್ ಕಾಂ ಕವಿ ಸಮೂಹ ನಗರದ ಈಶ್ವರ ಗುಡಿ ಪ್ರಾಂಗಣದಲ್ಲಿ ಹಮ್ಮಿಕೊಂಡಿದ್ದ 151ನೇ ಕವಿಸಮಯ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಅವರು ಮಾತನಾಡಿದರು.<br /> <br /> ಜಿಲ್ಲೆಯಲ್ಲಿ ಉತ್ತಮ ಬರಹಗಾರು, ಹೋರಾಟಗಾರರು, ಚಿಂತಕರು ಇದ್ದಾರೆ. ವಿವಿಧ ಅಕಾಡೆಮಿಗಳ ನೇಮಕದಲ್ಲಿ ಅವರನ್ನು ಸರಕಾರ ಪರಿಗಣಿಸಬೇಕು. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ನಿಗಮ, ಮಂಡಳಿ ಹಾಗೂ ಅಕಾಡೆಮಿಗಳ ಸದಸ್ಯರು, ಅಧ್ಯಕ್ಷರ ನೇಮಕಾತಿ ನಡೆಯುತ್ತಿದೆ. ಈ ಬಾರಿಯಾದರೂ ಜಿಲ್ಲೆಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು ಎಂದು ಅವರು ಆಶಿಸಿದರು.<br /> <br /> ಕನ್ನಡ ಸಾಹಿತ್ಯ ಪರಿಷತ್ನ ದತ್ತಿನಿಧಿ ಬಹುಮಾನ ಪಡೆದ ಶಿ.ಕಾ.ಬಡಿಗೇರ ಹಾಗೂ ಮಾಲಾ ಬಡಿಗೇರ ಅವರನ್ನು ಸನ್ಮಾನಿಸಲಾಯಿತು. ಕವಿಗೋಷ್ಠಿಯಲ್ಲಿ ಎ.ಪಿ.ಅಂಗಡಿ, ಶಾಂತಾದೇವಿ ಹಿರೇಮಠ, ಪುಷ್ಪಲತಾ ಏಳುಬಾವಿ, ವಿಜಯಲಕ್ಷ್ಮೀ ಮಠದ, ಅನಸೂಯಾ ಜಾಗಿರದಾರ, ಮಾಲಾ ಬಡಿಗೇರ, ಸಿರಾಜ್ ಬಿಸರಳ್ಳಿ ಕವನ ವಾಚನ ಮಾಡಿದರು.<br /> <br /> ಶಿವಾನಂದ ಹೊದ್ಲೂರ, ಹನುಮಂತಪ್ಪ ಅಂಡಗಿ, ರಾಕೇಶ ಕಾಂಬ್ಳೇಕರ್, ಬಸವರಾಜ ಸಂಕನಗೌಡರ ಉಪಸ್ಥಿತರಿದ್ದರು. ಸಿರಾಜ್ ಬಿಸರಳ್ಳಿ ಸ್ವಾಗತಿಸಿದರು. ಮಹೇಶ ಬಳ್ಳಾರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಜಿಲ್ಲೆಯಲ್ಲಿ ಇತ್ತೀಚೆಗೆ ಶಿಷ್ಟ ಸಾಹಿತ್ಯ ಬೆಳೆಯುತ್ತಿದೆ. ಜಿಲ್ಲೆಯ ಸಾಹಿತ್ಯಿಕ ಕೊಡುಗೆ ಗಮನಾರ್ಹ ಎಂದು ಹಿರಿಯ ಸಾಹಿತಿ ಮಹಾಂತೇಶ ಮಲ್ಲನಗೌಡರ ಹೇಳಿದರು.<br /> <br /> ಕನ್ನಡನೆಟ್ ಡಾಟ್ ಕಾಂ ಕವಿ ಸಮೂಹ ನಗರದ ಈಶ್ವರ ಗುಡಿ ಪ್ರಾಂಗಣದಲ್ಲಿ ಹಮ್ಮಿಕೊಂಡಿದ್ದ 151ನೇ ಕವಿಸಮಯ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಅವರು ಮಾತನಾಡಿದರು.<br /> <br /> ಜಿಲ್ಲೆಯಲ್ಲಿ ಉತ್ತಮ ಬರಹಗಾರು, ಹೋರಾಟಗಾರರು, ಚಿಂತಕರು ಇದ್ದಾರೆ. ವಿವಿಧ ಅಕಾಡೆಮಿಗಳ ನೇಮಕದಲ್ಲಿ ಅವರನ್ನು ಸರಕಾರ ಪರಿಗಣಿಸಬೇಕು. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ನಿಗಮ, ಮಂಡಳಿ ಹಾಗೂ ಅಕಾಡೆಮಿಗಳ ಸದಸ್ಯರು, ಅಧ್ಯಕ್ಷರ ನೇಮಕಾತಿ ನಡೆಯುತ್ತಿದೆ. ಈ ಬಾರಿಯಾದರೂ ಜಿಲ್ಲೆಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು ಎಂದು ಅವರು ಆಶಿಸಿದರು.<br /> <br /> ಕನ್ನಡ ಸಾಹಿತ್ಯ ಪರಿಷತ್ನ ದತ್ತಿನಿಧಿ ಬಹುಮಾನ ಪಡೆದ ಶಿ.ಕಾ.ಬಡಿಗೇರ ಹಾಗೂ ಮಾಲಾ ಬಡಿಗೇರ ಅವರನ್ನು ಸನ್ಮಾನಿಸಲಾಯಿತು. ಕವಿಗೋಷ್ಠಿಯಲ್ಲಿ ಎ.ಪಿ.ಅಂಗಡಿ, ಶಾಂತಾದೇವಿ ಹಿರೇಮಠ, ಪುಷ್ಪಲತಾ ಏಳುಬಾವಿ, ವಿಜಯಲಕ್ಷ್ಮೀ ಮಠದ, ಅನಸೂಯಾ ಜಾಗಿರದಾರ, ಮಾಲಾ ಬಡಿಗೇರ, ಸಿರಾಜ್ ಬಿಸರಳ್ಳಿ ಕವನ ವಾಚನ ಮಾಡಿದರು.<br /> <br /> ಶಿವಾನಂದ ಹೊದ್ಲೂರ, ಹನುಮಂತಪ್ಪ ಅಂಡಗಿ, ರಾಕೇಶ ಕಾಂಬ್ಳೇಕರ್, ಬಸವರಾಜ ಸಂಕನಗೌಡರ ಉಪಸ್ಥಿತರಿದ್ದರು. ಸಿರಾಜ್ ಬಿಸರಳ್ಳಿ ಸ್ವಾಗತಿಸಿದರು. ಮಹೇಶ ಬಳ್ಳಾರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>