<p>ಕುಷ್ಟಗಿ: ಬದಲಾಗುತ್ತಿರುವ ಸಾಮಾ ಜಿಕ, ಕೌಟುಂಬಿಕ ವ್ಯವಸ್ಥೆಗೆ ಅನುಗುಣವಾಗಿ ಮಹಿಳೆಯರಿಗೆ ಕಾನೂನಿನ ಜ್ಞಾನ ಅವಶ್ಯ. ಈ ವಿಷಯದಲ್ಲಿ ಅರಿವು ಮೂಡಿಸಲು ಕಾನೂನು ಸೇವೆಗಳ ಪ್ರಾಧಿಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ಇಲ್ಲಿಯ ಸಿವಿಲ್ ಪ್ರಧಾನ ನ್ಯಾಯಾಧೀಶರಾದ ಸುಧಾ.ಎಸ್. ಓಂಕಾರ ಹೇಳಿದರು.<br /> <br /> ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಸ್ಥಳೀಯ ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ವತಿಯಿಂದ ಹಮ್ಮಿಕೊಂಡ ಕಾನೂನು ಸಾಕ್ಷರತಾ ರಥಕ್ಕೆ ಭಾನುವಾರ ಚಾಲನೆ ನೀಡಿ, ಬಳಿಕ ಹಿರೇಮನ್ನಾಪುರ ಗ್ರಾಮದಲ್ಲಿ ನಡೆದ ಕಾನೂನು ವಿದ್ಯಾ<br /> ಪ್ರಸಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಕಾನೂನಿನ ತಿಳಿವಳಿಕೆ ಹೊಂದಿದಷ್ಟೂ ಮಹಿಳೆಯರು ವಿವಿಧ ರೀತಿಯ ಸಮಸ್ಯೆಗಳಿಂದ ಪಾರಾಗಲು ಸಾಧ್ಯವಾಗುತ್ತದೆ. ಕಾನೂನು ಸೇವಾ ಸಮಿತಿ ವತಿಯಿಂದ ನಡೆಯುವ ಅರಿವು ನೆರವು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.<br /> <br /> ತಹಶೀಲ್ದಾರ್ ಎನ್.ಬಿ.ಪಾಟೀಲ, ಕಂದಾಯ ಇಲಾಖೆಯಿಂದ ಅನುಷ್ಠಾನಗೊಳ್ಳುವ ಕಾರ್ಯಕ್ರಮಗಳು ಮತ್ತು ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಅಲ್ಲದೇ ದುರ್ಮರಣಕ್ಕೆ ಒಳಗಾಗುವ ಬಿಪಿಎಲ್ ಕುಟುಂಬದ ಮುಖ್ಯಸ್ಥನ ಹತ್ತಿರದ ಸಂಬಂಧಿಕರಿಗೆ ರಾಷ್ಟ್ರೀಯ ಭದ್ರತಾ ಯೋಜನೆಯಲ್ಲಿ ₨ 20,000 ಪರಿಹಾರ ನೀಡಲಾಗುತ್ತದೆ ಎಂದರು.<br /> <br /> ಗ್ರಾ.ಪಂ ಅಧ್ಯಕ್ಷೆ ಸರೋಜಾ ಹರಿಜನ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ಸಂಗನಗೌಡ ಪಾಟೀಲ ಇತರರು ಇದ್ದರು. ವಕೀಲ ಎನ್.ನರಸಿಂಗರಾವ್, ಎಚ್.ಆರ್.ನಾಯಕ್ ಉಪನ್ಯಾಸ ನೀಡಿದರು.<br /> <br /> ನಾಗಪ್ಪ ಸೂಡಿ, ರುದ್ರಗೌಡ ಪಾಟೀಲ, ಅಮರೇಗೌಡ ಪಾಟೀಲ, ಎಚ್.ಆರ್.ನಾಯಕ್, ಎಂ.ಎಸ್.ಗೋಡೆ, ಶರಣಗೌಡ ಪಾಟೀಲ, ಚಂದ್ರಶೇಖರ ಉಪ್ಪಿನ, ಎ.ಎಚ್.ಪಲ್ಲೇದ, ವೆಂಕಟೇಶ ಈಳಿಗೇರ, ಪ್ರಭು ಸೂಡಿ, ಸಿಬ್ಬಂದಿ ಸುನಿಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಷ್ಟಗಿ: ಬದಲಾಗುತ್ತಿರುವ ಸಾಮಾ ಜಿಕ, ಕೌಟುಂಬಿಕ ವ್ಯವಸ್ಥೆಗೆ ಅನುಗುಣವಾಗಿ ಮಹಿಳೆಯರಿಗೆ ಕಾನೂನಿನ ಜ್ಞಾನ ಅವಶ್ಯ. ಈ ವಿಷಯದಲ್ಲಿ ಅರಿವು ಮೂಡಿಸಲು ಕಾನೂನು ಸೇವೆಗಳ ಪ್ರಾಧಿಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ಇಲ್ಲಿಯ ಸಿವಿಲ್ ಪ್ರಧಾನ ನ್ಯಾಯಾಧೀಶರಾದ ಸುಧಾ.ಎಸ್. ಓಂಕಾರ ಹೇಳಿದರು.<br /> <br /> ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಸ್ಥಳೀಯ ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ವತಿಯಿಂದ ಹಮ್ಮಿಕೊಂಡ ಕಾನೂನು ಸಾಕ್ಷರತಾ ರಥಕ್ಕೆ ಭಾನುವಾರ ಚಾಲನೆ ನೀಡಿ, ಬಳಿಕ ಹಿರೇಮನ್ನಾಪುರ ಗ್ರಾಮದಲ್ಲಿ ನಡೆದ ಕಾನೂನು ವಿದ್ಯಾ<br /> ಪ್ರಸಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಕಾನೂನಿನ ತಿಳಿವಳಿಕೆ ಹೊಂದಿದಷ್ಟೂ ಮಹಿಳೆಯರು ವಿವಿಧ ರೀತಿಯ ಸಮಸ್ಯೆಗಳಿಂದ ಪಾರಾಗಲು ಸಾಧ್ಯವಾಗುತ್ತದೆ. ಕಾನೂನು ಸೇವಾ ಸಮಿತಿ ವತಿಯಿಂದ ನಡೆಯುವ ಅರಿವು ನೆರವು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.<br /> <br /> ತಹಶೀಲ್ದಾರ್ ಎನ್.ಬಿ.ಪಾಟೀಲ, ಕಂದಾಯ ಇಲಾಖೆಯಿಂದ ಅನುಷ್ಠಾನಗೊಳ್ಳುವ ಕಾರ್ಯಕ್ರಮಗಳು ಮತ್ತು ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಅಲ್ಲದೇ ದುರ್ಮರಣಕ್ಕೆ ಒಳಗಾಗುವ ಬಿಪಿಎಲ್ ಕುಟುಂಬದ ಮುಖ್ಯಸ್ಥನ ಹತ್ತಿರದ ಸಂಬಂಧಿಕರಿಗೆ ರಾಷ್ಟ್ರೀಯ ಭದ್ರತಾ ಯೋಜನೆಯಲ್ಲಿ ₨ 20,000 ಪರಿಹಾರ ನೀಡಲಾಗುತ್ತದೆ ಎಂದರು.<br /> <br /> ಗ್ರಾ.ಪಂ ಅಧ್ಯಕ್ಷೆ ಸರೋಜಾ ಹರಿಜನ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ಸಂಗನಗೌಡ ಪಾಟೀಲ ಇತರರು ಇದ್ದರು. ವಕೀಲ ಎನ್.ನರಸಿಂಗರಾವ್, ಎಚ್.ಆರ್.ನಾಯಕ್ ಉಪನ್ಯಾಸ ನೀಡಿದರು.<br /> <br /> ನಾಗಪ್ಪ ಸೂಡಿ, ರುದ್ರಗೌಡ ಪಾಟೀಲ, ಅಮರೇಗೌಡ ಪಾಟೀಲ, ಎಚ್.ಆರ್.ನಾಯಕ್, ಎಂ.ಎಸ್.ಗೋಡೆ, ಶರಣಗೌಡ ಪಾಟೀಲ, ಚಂದ್ರಶೇಖರ ಉಪ್ಪಿನ, ಎ.ಎಚ್.ಪಲ್ಲೇದ, ವೆಂಕಟೇಶ ಈಳಿಗೇರ, ಪ್ರಭು ಸೂಡಿ, ಸಿಬ್ಬಂದಿ ಸುನಿಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>