<p><strong>ಶಿವಮೊಗ್ಗ: </strong>ಮುಜರಾಯಿ ವ್ಯಾಪ್ತಿಗೆ ಒಳಪಡದದೇವಸ್ಥಾನಗಳ ಜೀರ್ಣೋದ್ಧಾರಕ್ಕೂ ಸರ್ಕಾರನೆರವು ನೀಡಲಿದೆ ಎಂದುಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.</p>.<p>ಊರುಗಡೂರಿನ ಗುಡ್ಡೇಮರಡಿ ದೇವಸ್ಥಾನದ ಸಭಾಂಗಣದಲ್ಲಿ ಶನಿವಾರಹಮ್ಮಿಕೊಂಡಿದ್ದತಾಲ್ಲೂಕು ದೇವಸ್ಥಾನ ಸಮಿತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಾಜ್ಯದ ಹಲವು ದೇವಸ್ಥಾನಗಳು ಸರ್ಕಾರದ ನೆರವಿಲ್ಲದೆ ನಡೆಯುತ್ತಿವೆ. ಇಂತಹ ದೇವಾಲಯಗಳಲ್ಲೂ ಸಮಾಜಮುಖಿ ಕೆಲಸಗಳು ಭಕ್ತರ ಸಹಕಾರದಲ್ಲೇ ನಡೆಯುತ್ತಿವೆ.ಅವುಗಳ ಜೀರ್ಣೋದ್ಧಾರವೂ ಮುಖ್ಯ. ದೇವಸ್ಥಾನ ಸಮಿತಿಗಳು ಪ್ರಸ್ತಾವ ಸಲ್ಲಿಸಿದರೆ ನೆರವು ನೀಡಲು ಸಿದ್ದ ಎಂದರು.</p>.<p>ರಾಜ್ಯದ ಸುಮಾರು 110 ಮುಜರಾಯಿ ದೇವಸ್ಥಾನಗಳಲ್ಲಿ ಏ.26ರಂದು ಸಾಮೂಹಿಕ ವಿವಾಹ ನಡೆಸಲಾಗುತ್ತಿದೆ.ವಧು–ವರರಿಗೆ₨ 40 ಸಾವಿರ ಮೌಲ್ಯದ ತಾಳಿ, ₨ 10 ಸಾವಿರ ಮೌಲ್ಯದ ಧಾರೆ ಸೀರೆ ಸೇರಿಪ್ರತಿ ದಂಪತಿಗೆ ₨ 55 ಸಾವಿರ ವೆಚ್ಚ ಮಾಡಲಾಗುವುದು. ದೇವಸ್ಥಾನ ಸಮಿತಿಗಳು ಜನರಲ್ಲಿ ಜಾಗೃತಿ ಮೂಡಿಸಬೇಕು. ಸಾಮೂಹಿಕ ಮದುವೆಗೆ ಸಹಕರಿಸಬೇಕು ಎಂದು ಕೋರಿದರು.</p>.<p>ಸಾರ್ವಜನಿಕರ ಹಣ ಸಾಮಾಜಿಕವಾಗಿ ವಿನಿಯೋಗಿಸಲಾಗುತ್ತಿದೆ.ಸಾಮೂಹಿಕ ಮದುವೆಗಳು ಬಡವರಿಗೆ ವರದಾನ. ರಾಜ್ಯಸರ್ಕಾರದ ಇಂತಹ ಸಮಾಜಮುಖಿ ಕಾರ್ಯಕ್ಕೆ ಎಲ್ಲ ಶಾಸಕರೂ ಸಹಕಾರ ನೀಡಬೇಕು.ರಾಜ್ಯದಲ್ಲಿ ಸುಮಾರು 35 ಸಾವಿರ ದೇವಸ್ಥಾನಗಳಿವೆ.ಆರ್ಥಿಕವರಮಾನದ ಮಾನದಂಡದಲ್ಲಿ ಇವುಗಳ ವಿಂಗಡಣೆ ಮಾಡಲಾಗಿದೆ. ದೇವಸ್ಥಾನಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.</p>.<p>ಶಾಸಕ ಕೆ.ಬಿ.ಅಶೋಕ್ ನಾಯ್ಕ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್, ಪಾಲಿಕೆ ಉಪ ಮೇಯರ್ ಎಸ್.ಎನ್.ಚನ್ನಬಸಪ್ಪ, ಜಿಲ್ಲಾ ಪಂಚಾಯಿತಿ ಸಮಸ್ಯೆ ಹೇಮಾವತಿ, ಶಿವನಂಜಪ್ಪ,ವಿರೂಪಾಕ್ಷಪ್ಪಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಮುಜರಾಯಿ ವ್ಯಾಪ್ತಿಗೆ ಒಳಪಡದದೇವಸ್ಥಾನಗಳ ಜೀರ್ಣೋದ್ಧಾರಕ್ಕೂ ಸರ್ಕಾರನೆರವು ನೀಡಲಿದೆ ಎಂದುಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.</p>.<p>ಊರುಗಡೂರಿನ ಗುಡ್ಡೇಮರಡಿ ದೇವಸ್ಥಾನದ ಸಭಾಂಗಣದಲ್ಲಿ ಶನಿವಾರಹಮ್ಮಿಕೊಂಡಿದ್ದತಾಲ್ಲೂಕು ದೇವಸ್ಥಾನ ಸಮಿತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಾಜ್ಯದ ಹಲವು ದೇವಸ್ಥಾನಗಳು ಸರ್ಕಾರದ ನೆರವಿಲ್ಲದೆ ನಡೆಯುತ್ತಿವೆ. ಇಂತಹ ದೇವಾಲಯಗಳಲ್ಲೂ ಸಮಾಜಮುಖಿ ಕೆಲಸಗಳು ಭಕ್ತರ ಸಹಕಾರದಲ್ಲೇ ನಡೆಯುತ್ತಿವೆ.ಅವುಗಳ ಜೀರ್ಣೋದ್ಧಾರವೂ ಮುಖ್ಯ. ದೇವಸ್ಥಾನ ಸಮಿತಿಗಳು ಪ್ರಸ್ತಾವ ಸಲ್ಲಿಸಿದರೆ ನೆರವು ನೀಡಲು ಸಿದ್ದ ಎಂದರು.</p>.<p>ರಾಜ್ಯದ ಸುಮಾರು 110 ಮುಜರಾಯಿ ದೇವಸ್ಥಾನಗಳಲ್ಲಿ ಏ.26ರಂದು ಸಾಮೂಹಿಕ ವಿವಾಹ ನಡೆಸಲಾಗುತ್ತಿದೆ.ವಧು–ವರರಿಗೆ₨ 40 ಸಾವಿರ ಮೌಲ್ಯದ ತಾಳಿ, ₨ 10 ಸಾವಿರ ಮೌಲ್ಯದ ಧಾರೆ ಸೀರೆ ಸೇರಿಪ್ರತಿ ದಂಪತಿಗೆ ₨ 55 ಸಾವಿರ ವೆಚ್ಚ ಮಾಡಲಾಗುವುದು. ದೇವಸ್ಥಾನ ಸಮಿತಿಗಳು ಜನರಲ್ಲಿ ಜಾಗೃತಿ ಮೂಡಿಸಬೇಕು. ಸಾಮೂಹಿಕ ಮದುವೆಗೆ ಸಹಕರಿಸಬೇಕು ಎಂದು ಕೋರಿದರು.</p>.<p>ಸಾರ್ವಜನಿಕರ ಹಣ ಸಾಮಾಜಿಕವಾಗಿ ವಿನಿಯೋಗಿಸಲಾಗುತ್ತಿದೆ.ಸಾಮೂಹಿಕ ಮದುವೆಗಳು ಬಡವರಿಗೆ ವರದಾನ. ರಾಜ್ಯಸರ್ಕಾರದ ಇಂತಹ ಸಮಾಜಮುಖಿ ಕಾರ್ಯಕ್ಕೆ ಎಲ್ಲ ಶಾಸಕರೂ ಸಹಕಾರ ನೀಡಬೇಕು.ರಾಜ್ಯದಲ್ಲಿ ಸುಮಾರು 35 ಸಾವಿರ ದೇವಸ್ಥಾನಗಳಿವೆ.ಆರ್ಥಿಕವರಮಾನದ ಮಾನದಂಡದಲ್ಲಿ ಇವುಗಳ ವಿಂಗಡಣೆ ಮಾಡಲಾಗಿದೆ. ದೇವಸ್ಥಾನಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.</p>.<p>ಶಾಸಕ ಕೆ.ಬಿ.ಅಶೋಕ್ ನಾಯ್ಕ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್, ಪಾಲಿಕೆ ಉಪ ಮೇಯರ್ ಎಸ್.ಎನ್.ಚನ್ನಬಸಪ್ಪ, ಜಿಲ್ಲಾ ಪಂಚಾಯಿತಿ ಸಮಸ್ಯೆ ಹೇಮಾವತಿ, ಶಿವನಂಜಪ್ಪ,ವಿರೂಪಾಕ್ಷಪ್ಪಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>