ಯೋಜನಾ ಸಭೆಯ ಮುಖ್ಯಸ್ಥ ಡಾ.ಎಚ್.ಕೆ.ವೀರಣ್ಣ, ಈ ಯೋಜನೆ ಅಡಿ ಐದು ಜಿಲ್ಲೆಗಳ 14 ತಾಲ್ಲೂಕು ವ್ಯಾಪ್ತಿಯ 37 ಕ್ಲಸ್ಟರ್ ಆಯ್ಕೆ ಮಾಡಲಾಗಿದೆ. 97 ಗ್ರಾಮಗಳ 2 ಸಾವಿರ ಹೆಕ್ಟೇರ್ ರೈತರ ತಾಖಿನಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಅಡಿಕೆ, ತೆಂಗು, ಮೆಕ್ಕೆಜೋಳ, ಭತ್ತ, ತಂಬಾಕು, ಆಲೂಗಡ್ಡೆ, ಬಾಳೆ, ಕಾಳುಮೆಣಸು, ಶುಂಠಿ, ಟೊಮಾಟೊ, ಮೆಣಸಿನಕಾಯಿ ಬೆಳೆಗಳನ್ನು ಪ್ರಾತ್ಯಕ್ಷಿಕೆಯಲ್ಲಿ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.