<p><strong>ಶಿವಮೊಗ್ಗ:</strong>ಬೆಳಗಾವಿ ಅಧಿವೇಶನಕ್ಕೆ ನಿಗದಿ ಮಾಡಿರುವ ಅವಧಿ ಅತ್ಯಂತ ಕಡಿಮೆ. ಇಷ್ಟು ಕಡಿಮೆ ಅವಧಿಯಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಲು ಸಾಧ್ಯವಿಲ್ಲ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಕಿಡಿ ಕಾರಿದರು.</p>.<p>ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.</p>.<p>ಬೀಕರ ಬರಗಾಲ ರಾಜ್ಯವನ್ನು ಆವರಿಸಿದೆ. ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿದಿಲ್ಲ. ಮಂತ್ರಿಗಳು ಹಳ್ಳಿಗಳತ್ತ ಮುಖ ಮಾಡಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಅಧಿವೇಶನವನ್ನೂ ಸುದೀರ್ಘವಾಗಿ ನಡೆಸದಿದ್ದರೆ ಹೇಗೆ ಎಂದು ಪ್ರಶ್ನಿಸಿದರು.</p>.<p>ವಿದೇಶಕ್ಕೆ ಹೊರಟಿರುವ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಅಧಿವೇಶನದ ಗಂಭೀರತೆ ಅರ್ಥವಾಗಿಲ್ಲ. ಜೆಡಿಎಸ್, ಕಾಂಗ್ರೆಸ್ ಶಾಸಕರು ಅವರನ್ನೇ ಅನುಸರಿಸಿದರೆ ಅಧಿವೇಶನ ನಡೆದಂತೆ ಎಂದು ವ್ಯಂಗ್ಯವಾಡಿದರು.</p>.<p>ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಕಾಟಾಚಾರಕ್ಕೆ ಒಂದಷ್ಟು ರೈತರಿಗೆ ಋಣಭಾರ ತೀರುವಳಿ ಪತ್ರ ನೀಡುವ ನಾಟಕವಾಡುತ್ತಿದ್ದಾರೆ. ಜನರಿಗೆ ಕೊಟ್ಟ ಯಾವ ಭರವಸೆಗಳನ್ನೂ ಈಡೇರಿಸದ ಸರ್ಕಾರ ಲೂಟಿಗೆ ನಿಂತಿದೆ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong>ಬೆಳಗಾವಿ ಅಧಿವೇಶನಕ್ಕೆ ನಿಗದಿ ಮಾಡಿರುವ ಅವಧಿ ಅತ್ಯಂತ ಕಡಿಮೆ. ಇಷ್ಟು ಕಡಿಮೆ ಅವಧಿಯಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಲು ಸಾಧ್ಯವಿಲ್ಲ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಕಿಡಿ ಕಾರಿದರು.</p>.<p>ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.</p>.<p>ಬೀಕರ ಬರಗಾಲ ರಾಜ್ಯವನ್ನು ಆವರಿಸಿದೆ. ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿದಿಲ್ಲ. ಮಂತ್ರಿಗಳು ಹಳ್ಳಿಗಳತ್ತ ಮುಖ ಮಾಡಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಅಧಿವೇಶನವನ್ನೂ ಸುದೀರ್ಘವಾಗಿ ನಡೆಸದಿದ್ದರೆ ಹೇಗೆ ಎಂದು ಪ್ರಶ್ನಿಸಿದರು.</p>.<p>ವಿದೇಶಕ್ಕೆ ಹೊರಟಿರುವ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಅಧಿವೇಶನದ ಗಂಭೀರತೆ ಅರ್ಥವಾಗಿಲ್ಲ. ಜೆಡಿಎಸ್, ಕಾಂಗ್ರೆಸ್ ಶಾಸಕರು ಅವರನ್ನೇ ಅನುಸರಿಸಿದರೆ ಅಧಿವೇಶನ ನಡೆದಂತೆ ಎಂದು ವ್ಯಂಗ್ಯವಾಡಿದರು.</p>.<p>ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಕಾಟಾಚಾರಕ್ಕೆ ಒಂದಷ್ಟು ರೈತರಿಗೆ ಋಣಭಾರ ತೀರುವಳಿ ಪತ್ರ ನೀಡುವ ನಾಟಕವಾಡುತ್ತಿದ್ದಾರೆ. ಜನರಿಗೆ ಕೊಟ್ಟ ಯಾವ ಭರವಸೆಗಳನ್ನೂ ಈಡೇರಿಸದ ಸರ್ಕಾರ ಲೂಟಿಗೆ ನಿಂತಿದೆ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>