ಅಧಿಕಾರ ವಿಕೇಂದ್ರೀಕರಣ ನೀತಿಯ ಅನ್ವಯ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಶಕ್ತಿ ತುಂಬಲು ಕ್ರಮ ಕೈಗೊಳ್ಳಲಾಗುವುದು. ಟಾಸ್ಕ್ಫೋರ್ಸ್ ಸಮಿತಿಗಳಲ್ಲೂ ಶಾಸಕರೇ ಅಧ್ಯಕ್ಷರಾಗಿದ್ದಾರೆ. ಹಾಗಾಗಿ, ಜಿಲ್ಲಾ ಪಂಚಾಯಿತಿಗಳ ಅಧಿಕಾರ ಕಿತ್ತುಕೊಳ್ಳಲಾಗಿದೆ ಎಂಬ ಆಪಾದನೆ ಇದೆ. ಸರ್ಕಾರಗಳು ಶಾಸಕರ ಅಧಿಕಾರ ಮೊಟುಕು ಮಾಡಲು ಹಿಂದೇಟು ಹಾಕುತ್ತಿರುವುದೇ ಇದಕ್ಕೆ ಕಾರಣ. ಶಾಸಕರಿಗೆ ಬೆಲೆ ಜಾಸ್ತಿ ಎನ್ನುವುದು ಗೊತ್ತಿರುವ ಸಂಗತಿಯೇ ಎಂದು ಪ್ರತಿಕ್ರಿಯಿಸಿದರು.