ಜನರ ಸಂಕಷ್ಟಗಳಿಗೆ ಸ್ಪಂದಿಸದ ಪರಿಣಾಮ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರ್ಕಾರ ಅಧಿಕಾರ ಕಳೆದುಕೊಂಡಿತು. ಬರ, ನೆರೆ ಸಮಯದಲ್ಲಿ ಮುಖ್ಯಮಂತ್ರಿ, ಸಚಿವರು ಸ್ಪಂದಿಸಲಿಲ್ಲ. ಈಗ ಬಿಜೆಪಿ ವಿರುದ್ಧ ಅನಗತ್ಯ ಟೀಕೆ ಮಾಡುತ್ತಿದ್ದಾರೆ. ಸಂತ್ರಸ್ತರರ ನೆರವಿಗೆ ಸರ್ಕಾರ ಶ್ರಮಿಸುತ್ತಿದೆ. ಎಲ್ಲ ಸಂತ್ರಸ್ಥರಿಗೂ ತಕ್ಷಣದ ಪರಿಹಾರವಾಗಿ ₨ 10 ಸಾವಿರ, ಮನೆ ಕಳೆದುಕೊಂಡವರಿಗೆ ₨1 ಲಕ್ಷ ನೀಡಲಾಗಿದೆ. ಜನರ ನಿರೀಕ್ಷೆ ಮೀರಿ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.