ಈ ಶಾಲೆಗೆ ಹೆಚ್ಚಾಗಿ ಪೌರ ಕಾರ್ಮಿಕರು, ಕೂಲಿಕಾರರ ಮಕ್ಕಳೇ ಬರುತ್ತಾರೆ. ಶಿಕ್ಷಣ ಇಲಾಖೆ, ಕೆಎಸ್ಆರ್ಟಿಸಿ ಅಧಿಕರಿಗಳಿಗೆ ಸಮಸ್ಯೆ ಕುರಿತು ಹಲವು ಬಾರಿ ಗಮನಕ್ಕೆ ತಂದರೂ ಸಮಸ್ಯೆ ಬರೆಹರಿದಿರಲಿಲ್ಲ. ಸ್ವತಃ ಮಕ್ಕಳೇ ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ಸಹಾಯವಾಣಿಗೆ ಪತ್ರ ಬರೆದು ದೂರು ನೀಡಿದ್ದರು. ನಂತರ ಶಾಲೆಗೆ ಭೇಟಿ ನೀಡಿದ ಮಕ್ಕಳ ರಕ್ಷಣಾ ಸಮಿತಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿ ಮಂಡಳಿ ಪಾಲಿಕೆಗೆ ನೋಟಿಸ್ ನೀಡಿದ್ದವು.