ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮಾಕ್ಷಿಪಾಳ್ಯ ಕೊಲೆ ಕೇಸ್: ಕುಣಿಗಲ್ ಗಿರಿ ಬಂಧನ

Last Updated 7 ಡಿಸೆಂಬರ್ 2020, 5:15 IST
ಅಕ್ಷರ ಗಾತ್ರ

ಬೆಂಗಳೂರು: ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣ ಸಂಬಂಧ ಕುಖ್ಯಾತ ಕಳ್ಳ ಕುಣಿಗಲ್‌ ಗಿರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇತ್ತೀಚೆಗೆ, ಕಾಮಾಕ್ಷಿಪಾಳ್ಯದಲ್ಲಿ ಮಂಜುನಾಥ್ ಎಂಬುವರರ ಕೊಲೆ ನಡೆದಿತ್ತು. ಪ್ರಕರಣ ಸಂಬಂಧ ಆರೋಪಿ ಸೈಕೊ ವಿಶ್ವನನ್ನು ಗುಂಡಿಕ್ಕಿ ಸೆರೆ ಹಿಡಿಯಲಾಗಿತ್ತು. ಇದೇ ಪ್ರಕರಣದಲ್ಲಿ ಕುಣಿಗಲ್ ಗಿರಿ ಪಾತ್ರವೂ ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಇದೀಗ, ಆತನನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT