ಅಂದು ಕುಪ್ಪಳಿಯ ಕವಿಶೈಲದಲ್ಲಿ ಬೆಳಿಗ್ಗೆ 9ಕ್ಕೆ ಕವಿನಮನ, 10.15ಕ್ಕೆ ಹೇಮಾಂಗಣದಲ್ಲಿ ನಡೆಯುವ ಕಾರ್ಯಕ್ರಮದ ಉದ್ಘಾಟನೆ, ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ ಸಮಾರಂಭವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೆರವೇರಿಸುವರು. ಪಂಜಾಬಿ ಸಾಹಿತಿಗಳಾದ ಡಾ. ಅಜೀತ್ ಕೌರ್, ಗುರುಬಚನ್ ಸಿಂಗ್ ಭುಲ್ಲರ್ ಅವರಿಗೆ ಕುವೆಂಪು ರಾಷ್ಟ್ರೀಯ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.