ಶಂಕರಘಟ್ಟ: ನ. 9ರಂದು ನಿಗದಿಯಾಗಿದ್ದ ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪದವಿ ಪರೀಕ್ಷೆಗಳನ್ನು (ಬಿ.ಇಡಿ ಸೇರಿ)ಅಯೋಧ್ಯೆ ಕುರಿತ ತೀರ್ಪು ಹೊರಬರುವ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.
ಶನಿವಾರ ನಡೆಯಬೇಕಿದ್ದ ಪರೀಕ್ಷೆಗಳ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಕುಲಸಚಿವ (ಪರೀಕ್ಷಾಂಗ) ಪ್ರೊ. ಎಂ ವೆಂಕಟೇಶ್ವರುಲು ತಿಳಿಸಿದ್ದಾರೆ.