ಬೆಂಗಳೂರಿನ ಸ್ಫೂರ್ತಿಎಜುಕೇಷನ್ ಟ್ರಸ್ಟ್, ಹುಬ್ಬಳ್ಳಿಯ ಸ್ಟೂಡೆಂಟ್ ಡೆವಲಪ್ಮೆಂಟ್ಟ್ರಸ್ಟ್, ಕೆಸಿಈ ಫೌಂಡೇಷನ್ ಅಧ್ಯಯನ ಕೇಂದ್ರಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ನೀಡಲಾಗುವುದಿಲ್ಲ. ಈ ಕೇಂದ್ರಗಳಿಗೆ ಪರೀಕ್ಷೆ ನಡೆಸಲು ತೆರಳಿದ್ದ ವಿಶ್ವವಿದ್ಯಾಲಯದ ಸಿಬ್ಬಂದಿಗೆ ಮುಂದಿನ ಎರಡು ವರ್ಷ ಪರೀಕ್ಷಾ ಕಾರ್ಯಗಳಿಗೆ ನಿಯೋಜಿಸಲಾಗುವುದಿಲ್ಲ. ಇಬ್ಬರು ವಿದ್ಯಾರ್ಥಿಗಳನ್ನೂಈಗಾಗಲೇ ಡಿಬಾರ್ ಮಾಡಲಾಗಿದೆ. ಮುಂದಿನ ಪರೀಕ್ಷೆಗಳು ಸುಮಗವಾಗಿ ನಡೆಸಲು ವಿಚಕ್ಷಣ ದಳ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.