ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂಬಿ: ಪ್ರಧಾನಿಗೆ ಕಪ್ಪು ಬಾವುಟ, ಬಲೂನು

Last Updated 12 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಚೆನ್ನೈ: ಕಾವೇರಿ ನಿರ್ವಹಣಾ ಮಂಡಳಿ (ಸಿಎಂಬಿ) ರಚನೆ ಮಾಡದ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿಗೆ ಭೇಟಿ ನೀಡಿದ್ದನ್ನು ವಿರೋಧಿಸಿ ಗುರುವಾರ ರಾಜ್ಯದಾದ್ಯಂತ ಭಾರಿ ಪ್ರತಿಭಟನೆ ನಡೆಸಲಾಯಿತು. ಈರೋಡ್‌ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಾಹುತಿಗೆ ಯತ್ನಿಸಿದ್ದ ಧರ್ಮಲಿಂಗಂ ಮೃತಪಟ್ಟಿದ್ದಾರೆ.

ಕಟ್ಟಡಗಳ ಮೇಲ್ಭಾಗಗಳಲ್ಲಿ ಕಪ್ಪು ಬಾವುಟ ಪ್ರದರ್ಶಿಸಲಾಯಿತು. ರಾಜಕೀಯ ನಾಯಕರು ಕಪ್ಪುಬಟ್ಟೆ ಧರಿಸಿ, ಮಹಿಳೆಯರು ಕಪ್ಪು ಸೀರೆ ಉಟ್ಟು ಪ್ರತಿಭಟನೆ ವ್ಯಕ್ತಪಡಿಸಿದರು. ಚೆನ್ನೈನಲ್ಲಿ 4 ಸಾವಿರಕ್ಕೂ ಹೆಚ್ಚು ಜನರನ್ನು ‍ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಮೋದಿ ಅವರ ವಿಮಾನ ಗುರುವಾರ ಬೆಳಿಗ್ಗೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ‘ಗೋ ಬ್ಯಾಕ್ ಮೋದಿ’ ಎಂದು ಬರೆದಿದ್ದ ಸಾವಿರಾರು ಕಪ್ಪು ಬಲೂನುಗಳನ್ನು ಹಾರಿಬಿಡಲಾಯಿತು.

‘ತಮಿಳುನಾಡು ಪ್ರವಾಸದ ಬಹುಭಾಗವನ್ನು ವಿಮಾನದ ಮೂಲಕವೇ ಪ್ರಧಾನಿ ಪೂರೈಸಲಿದ್ದಾರೆ ಎಂದು ತಿಳಿದಿದ್ದರಿಂದ, ಈ ರೀತಿ ಪ್ರತಿಭಟನೆ ನಡೆಸಲಾಯಿತು’ ಎಂದು ಟಿವಿಕೆ ಸಂಘಟನೆಯ ಅಧ್ಯಕ್ಷ ಟಿ.ವೇಲು ಮುರುಗನ್ ತಿಳಿಸಿದ್ದಾರೆ.

ಐಐಟಿ ಆವರಣದಿಂದ ಆಡ್ಯಾರ್ ಕ್ಯಾನ್ಸರ್ ಸಂಸ್ಥೆಗೆ ಕೇವಲ 1 ಕಿ.ಮೀ. ರಸ್ತೆ ಮಾರ್ಗವಾಗಿ ಪ್ರಯಾಣಿಸಿದರು. ಆದರೆ ಇಲ್ಲಿಯೂ ಪ್ರತಿಭಟನೆ ವ್ಯಕ್ತವಾಯಿತು.

ಟ್ವಿಟರ್‌ನಲ್ಲಿ #GoBackModi ಎನ್ನುವ ಹ್ಯಾಷ್‌ ಟ್ಯಾಗ್ ಗುರುವಾರ ಟ್ರೆಂಡಿಂಗ್ ಆಗಿತ್ತು.

ಮೋದಿಗೆ ಕಮಲ್ ಪತ್ರ: ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ಸ್ಥಾಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿರುವ ನಟ ಕಮಲ್ ಹಾಸನ್, ಕರ್ನಾಟಕದಲ್ಲಿ ವಿಧಾನ ಸಭೆ ಚುನಾವಣೆ ಇರುವುದರಿಂದ ಮಂಡಳಿ ಸ್ಥಾಪಿಸಲು ನಿಧಾನ ಮಾಡುತ್ತಿರುವುದು ಸರಿಯಲ್ಲ ಎಂದು  ಹೇಳಿದ್ದಾರೆ.

ಪ್ರಧಾನಿಗೆ ಮನವಿ ಪತ್ರ

ಸಿಎಂಬಿ ರಚಿಸುವಂತೆ ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಪ್ರಧಾನಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

‘ಕಾವೇರಿ ನದಿ ನೀರು ವಿವಾದ ನ್ಯಾಯಮಂಡಳಿ (ಸಿಡಬ್ಲ್ಯುಡಿಟಿ) ಹಾಗೂ ಸುಪ್ರೀಂ ಕೋರ್ಟ್ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸಂಪೂರ್ಣ ಅಧಿಕಾರ ಹೊಂದಿರುವ ಸಿಎಂಬಿ ರಚಿಸಬೇಕು’ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT