ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲಿಗೆ ಸಿಲುಕಿ ಚಿರತೆ ಸಾವು

Last Updated 6 ಫೆಬ್ರುವರಿ 2020, 14:10 IST
ಅಕ್ಷರ ಗಾತ್ರ

ಶಿವಮೊಗ್ಗ: ತಾಲ್ಲೂಕಿನಶಂಕರ ಅರಣ್ಯ ವಲಯ ವ್ಯಾಪ್ತಿಯ ಕೊನಗವಳ್ಳಿ ರೈಲು ಹಳಿಯ ಬಳಿ ಗುರುವಾರ ಚಿರತೆಯ ಶವ ಪತ್ತೆಯಾಗಿದೆ.

ಸುಮಾರು ಆರು ವರ್ಷದ ಚಿರತೆಯ ತಲೆ ಮತ್ತು ದೇಹದ ಎಡ ಭಾಗದಲ್ಲಿ ಗಾಯಗಳಾಗಿವೆ.ಶಿವಮೊಗ್ಗ–ತಾಳಗುಪ್ಪ ರೈಲಿಗೆ ಸಿಲುಕಿ ಮೃತಪಟ್ಟಿರಬಹುದು ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ.ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಖಚಿತ ಮಾಹಿತಿ ಸಿಗಲಿದೆ ಎಂದು ವಲಯ ಅರಣ್ಯಾಧಿಕಾರಿ ಕೆ.ಸಿ.ಜಯೇಶ್,ದಿನೇಶ್ಮಾಹಿತಿ ನೀಡಿದರು.

ಹುಲಿ ಮತ್ತು ಸಿಂಹಧಾಮದ ವನ್ಯಜೀವಿ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರು. ನಂತರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT