ಲಿಂಗನಮಕ್ಕಿ ಜಲಾಶಯದಿಂದ ನೀರು ಹರಿಸುವುದರಿಂದ ಉಂಟಾಗಬಹುದಾದ ಸಮಸ್ಯೆಗಳು, ಪರಿಣಾಮಗಳ ಕುರಿತು ಈಗಾಗಲೇ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಚಿಂತನೆ ನಡೆದಿದೆ. ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ, ಶಾಸಕ ಹರತಾಳು ಹಾಲಪ್ಪ, ಸಾಹಿತಿ ನಾ.ಡಿಸೋಜ, ರಂಗಕರ್ಮಿಗಳಾದ ಕೆ.ವಿ.ಅಕ್ಷರ, ಪ್ರಸನ್ನ, ಗ್ರಾಮ ಪಂಚಾಯಿತಿ ಸದಸ್ಯರಿಂದ ಆರಂಭಗೊಂಡು ಮಾಜಿ ಸಚಿವರು, ಹಾಲಿ ಶಾಸಕರು, ರಾಜಕೀಯ ಮುಖಂಡರು, ಪ್ರಗತಿಪರ ಹೋರಾಟಗಾರರು ಒಳಗೊಂಡಂತೆ ಹಂತ ಹಂತವಾಗಿ ಹೋರಾಟ ರೂಪಿಸಲು ಸಿದ್ಧತೆ ನಡೆದಿದೆ.