<p><strong>ಶಿವಮೊಗ್ಗ:</strong>ಚುನಾವಣೆಯಲ್ಲಿ ಗೆಲುವು ಸಾಧಿಸಲು ಜನಪ್ರತಿನಿಧಿಗಳು ಎಷ್ಟು ಬೇಕಾದರೂ ಹಣ ಚೆಲ್ಲುತ್ತಾರೆ. ಹಣ ಮಾಡುವ ಸಲುವಾಗಿಯೇ ಕೆಲವರು ರಾಜಕೀಯಕ್ಕೆ ಬರುತ್ತಾರೆ ಎಂದು ಜೆಡಿಯು ಅಭ್ಯರ್ಥಿ ಮಹಿಮ ಪಟೇಲ್ ಟೀಕಿಸಿದರು.</p>.<p>ಶಿವಮೊಗ್ಗ ಲೋಕಸಭಾ ಉಪ ಚುನಾವಣೆಗೆ ಸೋಮವಾರ ನಾಮಪತ್ರ ಸಲ್ಲಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.</p>.<p>ರಾಷ್ಟ್ರಮಟ್ಟದಲ್ಲಿ ಜೆಡಿಯು, ಎನ್ಡಿಎ ಮೈತ್ರಿಕೂಟದಲ್ಲಿದೆ. ರಾಜ್ಯದಲ್ಲಿ ಮೈತ್ರಿ ಇಲ್ಲ. ರಾಜಕೀಯ ನಿಂತ ನೀರಲ್ಲ ಎಂದು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.</p>.<p>ಜಿಲ್ಲೆಯ ಜನರು ಸಮಾಜವಾದಿ ಚಳವಳಿಯ ಹಿನ್ನೆಲೆ ಹೊಂದಿದ್ದಾರೆ. ಒಳ್ಳೆಯ ಮನಸ್ಸಿನ ಪ್ರಾಮಾಣಿಕ ರಾಜಕಾರಣಿ ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.</p>.<p>ಚುನಾವಣೆ ರಣರಂಗವಾಗಬಾರದು. ಪ್ರಜಾಪ್ರಭುತ್ವದ ಆಟವಾಗಬೇಕು. ಹಣ ನೀರಿನಂತೆ ಸುರಿದು ಗೆಲುವು ಸಾಧಿಸಿದ ರಾಜಕಾರಣಿಗಳು ಅನಿವಾರ್ಯವಾಗಿ ಭ್ರಷ್ಟಾಚಾರಕ್ಕೆ ಇಳಿಯುತ್ತಾರೆ. ಹಾಗಾಗಿ, ಮತದಾರು ಪ್ರಜ್ಞಾವಂತರು, ಪ್ರಾಮಾಣಿಕರಿಗೆ ಮಣೆ ಹಾಕಬೇಕು. ಆಮಿಷಕ್ಕೆ ಬಲಿಯಾಗಿ ಅಪ್ರಮಾಣಿಕರ ಆಯ್ಕೆ ಮಾಡಬಾರದು. ಜನ ಜಾಗೃತಿಗಾಗಿಯೇ ಚುನಾವಣಾ ಕಣಕ್ಕೆ ಇಳಿದಿದ್ದೇನೆ ಎಂದರು.</p>.<p>‘1967ರಲ್ಲಿ ನನ್ನ ತಂದೆ ಜೆ.ಎಚ್. ಪಟೇಲರನ್ನು ಜಿಲ್ಲೆಯ ಜನರು ಲೋಕಸಭೆಗೆ ಆರಿಸಿ ಕಳುಹಿಸಿದ್ದರು. ಅಂದು ಲೋಕಸಭೆಯಲ್ಲಿ ಕನ್ನಡದಲ್ಲಿ ಭಾಷಣ ಮಾಡಿ ದೇಶದ ಗಮನ ಸೆಳೆದಿದ್ದರು. ಜಿಲ್ಲೆಯ ಸಮಸ್ಯೆಗಳಿಗೆ ಸ್ಪಂದಿಸಿದ್ದರು. ಅವರ ಹಾದಿ ನನಗೆ ಶ್ರೀರಕ್ಷೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong>ಚುನಾವಣೆಯಲ್ಲಿ ಗೆಲುವು ಸಾಧಿಸಲು ಜನಪ್ರತಿನಿಧಿಗಳು ಎಷ್ಟು ಬೇಕಾದರೂ ಹಣ ಚೆಲ್ಲುತ್ತಾರೆ. ಹಣ ಮಾಡುವ ಸಲುವಾಗಿಯೇ ಕೆಲವರು ರಾಜಕೀಯಕ್ಕೆ ಬರುತ್ತಾರೆ ಎಂದು ಜೆಡಿಯು ಅಭ್ಯರ್ಥಿ ಮಹಿಮ ಪಟೇಲ್ ಟೀಕಿಸಿದರು.</p>.<p>ಶಿವಮೊಗ್ಗ ಲೋಕಸಭಾ ಉಪ ಚುನಾವಣೆಗೆ ಸೋಮವಾರ ನಾಮಪತ್ರ ಸಲ್ಲಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.</p>.<p>ರಾಷ್ಟ್ರಮಟ್ಟದಲ್ಲಿ ಜೆಡಿಯು, ಎನ್ಡಿಎ ಮೈತ್ರಿಕೂಟದಲ್ಲಿದೆ. ರಾಜ್ಯದಲ್ಲಿ ಮೈತ್ರಿ ಇಲ್ಲ. ರಾಜಕೀಯ ನಿಂತ ನೀರಲ್ಲ ಎಂದು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.</p>.<p>ಜಿಲ್ಲೆಯ ಜನರು ಸಮಾಜವಾದಿ ಚಳವಳಿಯ ಹಿನ್ನೆಲೆ ಹೊಂದಿದ್ದಾರೆ. ಒಳ್ಳೆಯ ಮನಸ್ಸಿನ ಪ್ರಾಮಾಣಿಕ ರಾಜಕಾರಣಿ ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.</p>.<p>ಚುನಾವಣೆ ರಣರಂಗವಾಗಬಾರದು. ಪ್ರಜಾಪ್ರಭುತ್ವದ ಆಟವಾಗಬೇಕು. ಹಣ ನೀರಿನಂತೆ ಸುರಿದು ಗೆಲುವು ಸಾಧಿಸಿದ ರಾಜಕಾರಣಿಗಳು ಅನಿವಾರ್ಯವಾಗಿ ಭ್ರಷ್ಟಾಚಾರಕ್ಕೆ ಇಳಿಯುತ್ತಾರೆ. ಹಾಗಾಗಿ, ಮತದಾರು ಪ್ರಜ್ಞಾವಂತರು, ಪ್ರಾಮಾಣಿಕರಿಗೆ ಮಣೆ ಹಾಕಬೇಕು. ಆಮಿಷಕ್ಕೆ ಬಲಿಯಾಗಿ ಅಪ್ರಮಾಣಿಕರ ಆಯ್ಕೆ ಮಾಡಬಾರದು. ಜನ ಜಾಗೃತಿಗಾಗಿಯೇ ಚುನಾವಣಾ ಕಣಕ್ಕೆ ಇಳಿದಿದ್ದೇನೆ ಎಂದರು.</p>.<p>‘1967ರಲ್ಲಿ ನನ್ನ ತಂದೆ ಜೆ.ಎಚ್. ಪಟೇಲರನ್ನು ಜಿಲ್ಲೆಯ ಜನರು ಲೋಕಸಭೆಗೆ ಆರಿಸಿ ಕಳುಹಿಸಿದ್ದರು. ಅಂದು ಲೋಕಸಭೆಯಲ್ಲಿ ಕನ್ನಡದಲ್ಲಿ ಭಾಷಣ ಮಾಡಿ ದೇಶದ ಗಮನ ಸೆಳೆದಿದ್ದರು. ಜಿಲ್ಲೆಯ ಸಮಸ್ಯೆಗಳಿಗೆ ಸ್ಪಂದಿಸಿದ್ದರು. ಅವರ ಹಾದಿ ನನಗೆ ಶ್ರೀರಕ್ಷೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>