<p><strong>ಶಿವಮೊಗ್ಗ: </strong>ಜಿಲ್ಲೆಯಲ್ಲಿ ಶನಿವಾರ ನಾಗರಿಕರು ಮಕರ ಸಂಕ್ರಾತಿಯನ್ನು ಸಂಭ್ರಮ, ಸಡಗರದಿಂದ ಆಚರಿಸಿದರು .</p>.<p>ಸೂರ್ಯ ತನ್ನ ಪಥ ಬದಲಿಸಿದ ಕ್ಷಣ, ಗ್ರಾಮೀಣ ಭಾಗದ ಸುಗ್ಗಿಯ ಹಬ್ಬವಾದ ಮಕರ ಸಂಕ್ರಾಂತಿ ಅಂಗವಾಗಿ ನಗರದ ಎಲ್ಲ ದೇವಾಲಯಗಳಲ್ಲೂ ವಿಶೇಷ ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು.</p>.<p>ಮಹಿಳೆಯರು ಬಣ್ಣದ ಸೂರೆಯುಟ್ಟು ಮನೆ, ಅಂಗಳದಲ್ಲಿ ಸಂಕ್ರಾಂತಿ ಚಿತ್ತಾರದ ರಂಗೋಲಿ ಬಿಡಿಸಿ, ಸಂಭ್ರಮಿಸಿದರು. ನಗರ, ಪಟ್ಟಣಗಳಲ್ಲಿ ಸಂಜೆ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿ, ನಂತರ ಮನೆ ಮನೆಗೆ ತೆರಳಿ ಕಬ್ಬಿನ ತುಂಡು, ಎಳ್ಳು–ಬೆಲ್ಲದ ಅಚ್ಚು ಹಂಚಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.</p>.<p>ಗ್ರಾಮೀಣ ಪ್ರದೇಶಗಳಲ್ಲಿ ಹಸು–ಕರಿಗಳಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಧವಸ, ಧಾನ್ಯದ ರಾಶಿ ಜತೆಗೆ, ಕೃಷಿ ಪರಿಕರಗಳನ್ನೂ ಪೂಜಿಸುವ ಮೂಲಕ ಸುಗ್ಗಿಯ ಹಬ್ಬ ಆಚರಿಸಿದರು. ಚುಮುಚುಮು ಚಳಿಯ ನಡುವೆ ಸಂಭ್ರಮಿಸುವ ಈ ಹಬ್ಬದಲ್ಲಿ ಎಳ್ಳು, ಬೆಲ್ಲ, ಕಬ್ಬು, ತರಕಾರಿ ಬೆಲೆ ಗಗನಕ್ಕೇರಿದ್ದ ಪರಿಣಾಮ ಖರೀದಿ ವೇಳೆ ಸಾಕಷ್ಟು ಚೌಕಾಸಿ ನಡೆಸುತ್ತಿದ್ದ ದೃಶ್ಯ ಕಂಡುಬಂತು.</p>.<p>ನಗರದ ಗುಡ್ಡೇಕಲ್ ಬಾಲಸುಬ್ರಮಣ್ಯ ದೇವಸ್ಥಾನದಲ್ಲಿ ಹಸು ಪೂಜೆ, ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಜ್ಯೋತಿ ಪೂಜೆ, ಇತರೆ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿದವು. ರವೀಂದ್ರ ನಗರ ದೇವಸ್ಥಾನದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಜಿಲ್ಲೆಯಲ್ಲಿ ಶನಿವಾರ ನಾಗರಿಕರು ಮಕರ ಸಂಕ್ರಾತಿಯನ್ನು ಸಂಭ್ರಮ, ಸಡಗರದಿಂದ ಆಚರಿಸಿದರು .</p>.<p>ಸೂರ್ಯ ತನ್ನ ಪಥ ಬದಲಿಸಿದ ಕ್ಷಣ, ಗ್ರಾಮೀಣ ಭಾಗದ ಸುಗ್ಗಿಯ ಹಬ್ಬವಾದ ಮಕರ ಸಂಕ್ರಾಂತಿ ಅಂಗವಾಗಿ ನಗರದ ಎಲ್ಲ ದೇವಾಲಯಗಳಲ್ಲೂ ವಿಶೇಷ ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು.</p>.<p>ಮಹಿಳೆಯರು ಬಣ್ಣದ ಸೂರೆಯುಟ್ಟು ಮನೆ, ಅಂಗಳದಲ್ಲಿ ಸಂಕ್ರಾಂತಿ ಚಿತ್ತಾರದ ರಂಗೋಲಿ ಬಿಡಿಸಿ, ಸಂಭ್ರಮಿಸಿದರು. ನಗರ, ಪಟ್ಟಣಗಳಲ್ಲಿ ಸಂಜೆ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿ, ನಂತರ ಮನೆ ಮನೆಗೆ ತೆರಳಿ ಕಬ್ಬಿನ ತುಂಡು, ಎಳ್ಳು–ಬೆಲ್ಲದ ಅಚ್ಚು ಹಂಚಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.</p>.<p>ಗ್ರಾಮೀಣ ಪ್ರದೇಶಗಳಲ್ಲಿ ಹಸು–ಕರಿಗಳಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಧವಸ, ಧಾನ್ಯದ ರಾಶಿ ಜತೆಗೆ, ಕೃಷಿ ಪರಿಕರಗಳನ್ನೂ ಪೂಜಿಸುವ ಮೂಲಕ ಸುಗ್ಗಿಯ ಹಬ್ಬ ಆಚರಿಸಿದರು. ಚುಮುಚುಮು ಚಳಿಯ ನಡುವೆ ಸಂಭ್ರಮಿಸುವ ಈ ಹಬ್ಬದಲ್ಲಿ ಎಳ್ಳು, ಬೆಲ್ಲ, ಕಬ್ಬು, ತರಕಾರಿ ಬೆಲೆ ಗಗನಕ್ಕೇರಿದ್ದ ಪರಿಣಾಮ ಖರೀದಿ ವೇಳೆ ಸಾಕಷ್ಟು ಚೌಕಾಸಿ ನಡೆಸುತ್ತಿದ್ದ ದೃಶ್ಯ ಕಂಡುಬಂತು.</p>.<p>ನಗರದ ಗುಡ್ಡೇಕಲ್ ಬಾಲಸುಬ್ರಮಣ್ಯ ದೇವಸ್ಥಾನದಲ್ಲಿ ಹಸು ಪೂಜೆ, ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಜ್ಯೋತಿ ಪೂಜೆ, ಇತರೆ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿದವು. ರವೀಂದ್ರ ನಗರ ದೇವಸ್ಥಾನದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>