ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತ್ತ ಕೋಳಿಗಳ ಸೂಕ್ತ ವಿಲೇವಾರಿ ಮಾಡದ ಫಾರಂ ಮಾಲೀಕನ ಬಂಧನ

Last Updated 25 ಮಾರ್ಚ್ 2020, 8:54 IST
ಅಕ್ಷರ ಗಾತ್ರ

ಶಿವಮೊಗ್ಗ: ಫಾರಂನಲ್ಲಿ ಅಧಿಕ ಸಂಖ್ಯೆಯ ಕೋಳಿಗಳು ಮೃತಪಟ್ಟರೂ ವೈಜ್ಞಾನಿಕವಾಗಿ ವಿಲೇವಾರಿ ಮಾಡದೆ ನಿರ್ಲಕ್ಷ್ಯ ತೋರಿದ ಶಿಕಾರಿಪುರ ಅಂಬರಗೊಪ್ಪ ನಿವಾಸಿ ರಂಗಸ್ವಾಮಿ ವಿರುದ್ಧ ಬುಧವಾರ ಪ್ರಕರಣ ದಾಖಲಾಗಿದೆ.

ತಮ್ಮ ಅಡಿಕೆ ತೋಟದಲ್ಲಿರುವ ಕೋಳಿ ಫಾರಂನಲ್ಲಿ ನೂರಾರು ಕೋಳಿಗಳು ಸತ್ತು ಬಿದ್ದಿದ್ದರೂ, ಅದನ್ನು ಸರಿಯಾಗಿ ವಿಲೇವಾರಿ ಮಾಡದಿರುವುದು ಕಂಡು ಬಂದಿದೆ. ಕೋಳಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟರೆ ಮಾಹಿತಿ ಒದಗಿಸುವಂತೆ ಈ ಮೊದಲು ಸೂಚನೆ ನೀಡಿದ್ದರೂ, ಮಾಹಿತಿ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ.

ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದ್ದು, ಜವಾಬ್ದಾರಿ ಪಾಲಿಸಲು ವಿಫಲರಾಗಿರುವ ಕಾರಣ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT