ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಟ್‌ವಾನಿ, ತಾರಾಗೆ ಮಾನಸ ರಾಷ್ಟ್ರೀಯ ಪ್ರಶಸ್ತಿ

Last Updated 8 ಜನವರಿ 2020, 12:20 IST
ಅಕ್ಷರ ಗಾತ್ರ

ಶಿವಮೊಗ್ಗ: ಮಾನಸ ಟ್ರಸ್ಟ್‌ಡಾ.ಅಶೋಕ್ ಪೈ ಸ್ಮರಣಾರ್ಥ ನೀಡುವ2019ನೇ ಸಾಲಿನ ಮಾನಸ ರಾಷ್ಟ್ರೀಯ ಪ್ರಶಸ್ತಿ ಮಹಾರಾಷ್ಟ್ರದ ಕಾರಜತ್‌ನ ಶ್ರದ್ಧಾ ಪುನರ್ವಸತಿ ಕೇಂದ್ರದ ಸ್ಥಾಪಕ ಡಾ.ಭರತ್ ವಾಟ್‌ವಾನಿ,ಚೆನೈನ ಸ್ಕಿಜೋಫ್ರೇನಿಯಾ ರಿಸರ್ಚ್‌ ಫೌಂಡೇಶನ್‌ನಿರ್ದೇಶಕಿಡಾ.ಆರ್.ತಾರಾ ಅವರಿಗೆ ಸಂದಿವೆ.

ರಾಷ್ಟ್ರಮಟ್ಟದಲ್ಲಿ ಮನೋವೈದ್ಯಕೀಯಕ್ಷೇತ್ರದಲ್ಲಿ ಸಮಾಜಮುಖಿ ಸಾಧನೆ ಮಾಡಿದ ಇಬ್ಬರಿಗೆ ಪ್ರತಿ ವರ್ಷ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.ಜೀವಮಾನ ಸಾಧನೆಗಾಗಿ ನೀಡುವ ವಿಶೇಷ ಪ್ರಶಸ್ತಿಗೆ ಬೆಂಗಳೂರಿನ ನಿಮ್ಹಾನ್ಸ್ಸಂಸ್ಥೆಯ ಮಾಜಿ ನಿರ್ದೇಶಕ ಡಾ.ಡಿ.ನಾಗರಾಜ ಅವರುಆಯ್ಕೆಯಾಗಿದ್ದಾರೆ. ಮೂರೂ ಪ್ರಶಸ್ತಿಗಳೂ ತಲಾ ₹ 75 ಸಾವಿರ ನಗದು, ಫಲಕ ಒಳಗೊಂಡಿವೆ.

ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಜ.11ರಂದು ಸಂಜೆ 5ಕ್ಕೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ, ಗೌರವಿಸಲಾಗುತ್ತಿದೆ ಎಂದು ಮಾನಸ ಸಂಸ್ಥೆಯ ನಿರ್ದೇಶಕ ಡಾ.ರಾಜೇಂದ್ರ ಚೆನ್ನಿ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT