ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಡ್ಯ ಜಿಲ್ಲೆಯಲ್ಲಿ 1 ಲಕ್ಷ ಅನಕ್ಷರಸ್ಥರು

ಪ್ರಸಕ್ತ ವರ್ಷ 37,160 ಅನಕ್ಷರಸ್ಥರಿಗೆ ಅಕ್ಷರ ಕಲಿಸುವ ಗುರಿ
Published : 21 ಜೂನ್ 2024, 7:24 IST
Last Updated : 21 ಜೂನ್ 2024, 7:24 IST
ಫಾಲೋ ಮಾಡಿ
Comments
ಮಹಿಳೆಯರಲ್ಲೇ ಹೆಚ್ಚು ಅನಕ್ಷರತೆ 2027ರೊಳಗೆ ಅನಕ್ಷರತೆ ಮುಕ್ತ ಗುರಿ ಜಿಲ್ಲೆಯಲ್ಲಿ 1858 ಕಲಿಕಾ ಕೇಂದ್ರಗಳು 
ಅಕ್ಷರಾಭ್ಯಾಸ ಮಾಡಿಸಿದ್ದ ಸರ್‌ಎಂವಿ!
ವಯಸ್ಕರ ಶಿಕ್ಷಣ ಇಲಾಖೆಗೆ 110 ವರ್ಷಗಳ ಇತಿಹಾಸವಿದೆ. ಮೈಸೂರು ಮಹಾರಾಜರ ಆಳ್ವಿಕೆಯ ಕಾಲದಲ್ಲಿ ದಿವಾನರಾಗಿದ್ದ ಎಂ.ವಿಶ್ವೇಶ್ವರಯ್ಯನವರು ತಮ್ಮ ಬೈಸಿಕಲ್‌ ಮೂಲಕ ಗ್ರಾಮಗಳಿಗೆ ಹೋಗಿ ಅನಕ್ಷರಸ್ಥರಿಗೆ ಅಕ್ಷರಾಭ್ಯಾಸ ಮಾಡಿಸುತ್ತಿದ್ದರು. ಅಲ್ಲಿಂದ ಇಲ್ಲಿಯವರೆಗೆ ವಯಸ್ಕರಿಗೆ ಶಿಕ್ಷಣ ನೀಡುವ ಸಾಕ್ಷರತಾ ಕಾರ್ಯಕ್ರಮಗಳು ಸರ್ಕಾರದ ವತಿಯಿಂದ ಒಂದಿಲ್ಲೊಂದು ಹೆಸರಿನಲ್ಲಿ ನಡೆಯುತ್ತಲೇ ಇವೆ.   ‘ಹೆಣ್ಣುಮಕ್ಕಳ ಸಾಕ್ಷರತಾ ಕಡಿಮೆ ಇರುವ ಮಂಡ್ಯ ಜಿಲ್ಲೆಯಲ್ಲಿ ಸಂಸದರಾಗಿದ್ದ ಜಿ.ಮಾದೇಗೌಡ ಅವರ ಒತ್ತಾಸೆಯಿಂದ ‘ಜಿಲ್ಲಾ ಸಾಕ್ಷರ ಸಮಿತಿ ರಚನೆಗೊಂಡಿತು. ‘ಸಾಕ್ಷರ ಜ್ಯೋತಿ’ ಹೆಸರಿನಲ್ಲಿ ಆಂದೋಲನವಾಗಿ ರೂಪುಗೊಂಡಿತು. ನಂತರ ‘ಸವಿನುಡಿ’ ಪಠ್ಯವಸ್ತು ರಚನೆಯಾಯಿತು. ಅಕ್ಷರ ಜಾಗೃತಿ ಮಂಡ್ಯ ಜನತೆಯ ಪ್ರಗತಿಗೆ ಸಹಕಾರಿಯಾಯಿತು’ ಎಂದು ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದರು.
‘ಸ್ವಯಂ ಸೇವಕರಿಗೆ ಉತ್ತಮ ಗೌರವಧನ ನೀಡಲಿ’
‘ಉತ್ತಮ ಗೌರವಧನ ಸಿಗದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಸೇವಕರು ಅನಕ್ಷರಸ್ಥರಿಗೆ ಅಕ್ಷರಾಭ್ಯಾಸ ಮಾಡಿಸಲು ಮುಂದೆ ಬರುತ್ತಿಲ್ಲ. ಅನುದಾನದ ಕೊರತೆಯಿಂದ ಪರಿಣಾಮಕಾರಿಯಾಗಿ ಸಾಕ್ಷರತಾ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಾಗುತ್ತಿಲ್ಲ. ವಲಸೆ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಕೇರಳ ಮಾದರಿ ಶಿಕ್ಷಣ ವ್ಯವಸ್ಥೆ ಜಾರಿಗೊಂಡರೆ ಶೇ 100ರಷ್ಟು ಸಾಕ್ಷರತೆ ಸಾಧಿಸಬಹುದು’ ಎನ್ನುತ್ತಾರೆ ಜನವಾದಿ ಮಹಿಳಾ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT