ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಕೆಲ ಅಧಿಕಾರಿಗಳು, ಮಧ್ಯವರ್ತಿಗಳು ಹಾಗೂ ರಸಗೊಬ್ಬರ ಅಂಗಡಿಗಳ ಮಾಲೀಕರು ಸೇರಿ ರಸಗೊಬ್ಬರದ ಕೃತಕ ಕೊರತೆ ಸೃಷ್ಟಿಸಿದ್ದರು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಕೃಷಿ ಸಚಿವ ಬಿ.ಸಿ.ಪಾಟೀಲ ಅವರ ಗಮನಕ್ಕೆ ತರಲಾಗಿತ್ತು. ನಂತರ ಅಂತಹ ಗೋದಾಮು, ಅಂಗಡಿಗಳ ಮೇಲೆ ದಾಳಿ ಮಾಡಿ ಕ್ರಮ ಜರುಗಿಸಲಾಗಿದೆ. ಮುಂದೆ ರೈತರಿಗೆ ರಸಗೊಬ್ಬರದ ಕೊರತೆ ಆಗುವುದಿಲ್ಲ’ ಎಂದು ಹೇಳಿದರು.