<p><strong>ಮಂಡ್ಯ</strong>: ಮಳವಳ್ಳಿ ಮತ್ತು ಮದ್ದೂರು ತಾಲ್ಲೂಕಿನಲ್ಲಿ ನಡೆದ ಎರಡು ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 11 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಆ.6ರಂದು ಮಳವಳ್ಳಿ ಪಟ್ಟಣದ ಮಾಗನೂರು ಸಮೀಪದ ಬಾರ್ ಅಂಡ್ ರೆಸ್ಟೋರೆಂಟ್ನಲ್ಲಿ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯೋಗೇಶ್ ಎಂಬಾತನನ್ನು ಕೊಲೆ ಮಾಡಿದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. </p>.<p>ಮಳವಳ್ಳಿ ವಡ್ಡರ ಕಾಲೊನಿಯ ಮನೋಜ್ ಪಟೇಲ್, ಎನ್ಇಎಸ್ ಬಡಾವಣೆಯ ನಂದನ್ ಜೆ., ಜಿ.ಆರ್.ಗಿರೀಶ್ (ಡಾಲಿ ಗುರು), ಎನ್.ಪ್ರೀತಮ್ ಬಂದಿತರು. </p>.<p class="Subhead">ಮದ್ದೂರು ಪ್ರಕರಣ:</p>.<p>ಮದ್ದೂರು ತಾಲ್ಲೂಕು ಕೆಸ್ತೂರು ಬಳಿಯ ಸ್ಕಂದ ಬಡಾವಣೆ ಬಳಿ ವಡ್ಡರದೊಡ್ಡಿ ಗ್ರಾಮದ ಪಿ.ಎನ್. ಅರುಣ್ ಎಂಬಾತನನ್ನು ಕೊಲೆಗೈದು ಪರಾರಿಯಾಗಿದ್ದ ಆರೋಪಿಗಳಾದ ನಿಡಘಟ್ಟ ಗ್ರಾಮದ ಎನ್.ಎಸ್. ವಿಕಾಸ್, ಹನುಮಂತಪುರದ ಎಚ್.ಆರ್. ಭರತ್ಗೌಡ, ಹನುಮಂತಪುರದ ಎಚ್.ಪಿ. ಹೇಮಂತ್ , ಯರಗನಹಳ್ಳಿಯ ವೈ.ಕೆ. ಚಂದನ್, ಹೆಮ್ಮನಹಳ್ಳಿಯ ಎಚ್.ಎಸ್. ಕುಮಾರ, ಹನುಮಂತಪುರದ ಎಚ್.ಆರ್. ನಿತ್ಯಾನಂದ ಹಾಗೂ ಹೆಮ್ಮನಹಳ್ಳಿಯ ಎಚ್.ಎಸ್. ಶ್ರೀನಿವಾಸ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. </p>.<p>ಎರಡೂ ಪ್ರಕರಣಗಳನ್ನು ಭೇದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಮಳವಳ್ಳಿ ಮತ್ತು ಮದ್ದೂರು ತಾಲ್ಲೂಕಿನಲ್ಲಿ ನಡೆದ ಎರಡು ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 11 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಆ.6ರಂದು ಮಳವಳ್ಳಿ ಪಟ್ಟಣದ ಮಾಗನೂರು ಸಮೀಪದ ಬಾರ್ ಅಂಡ್ ರೆಸ್ಟೋರೆಂಟ್ನಲ್ಲಿ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯೋಗೇಶ್ ಎಂಬಾತನನ್ನು ಕೊಲೆ ಮಾಡಿದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. </p>.<p>ಮಳವಳ್ಳಿ ವಡ್ಡರ ಕಾಲೊನಿಯ ಮನೋಜ್ ಪಟೇಲ್, ಎನ್ಇಎಸ್ ಬಡಾವಣೆಯ ನಂದನ್ ಜೆ., ಜಿ.ಆರ್.ಗಿರೀಶ್ (ಡಾಲಿ ಗುರು), ಎನ್.ಪ್ರೀತಮ್ ಬಂದಿತರು. </p>.<p class="Subhead">ಮದ್ದೂರು ಪ್ರಕರಣ:</p>.<p>ಮದ್ದೂರು ತಾಲ್ಲೂಕು ಕೆಸ್ತೂರು ಬಳಿಯ ಸ್ಕಂದ ಬಡಾವಣೆ ಬಳಿ ವಡ್ಡರದೊಡ್ಡಿ ಗ್ರಾಮದ ಪಿ.ಎನ್. ಅರುಣ್ ಎಂಬಾತನನ್ನು ಕೊಲೆಗೈದು ಪರಾರಿಯಾಗಿದ್ದ ಆರೋಪಿಗಳಾದ ನಿಡಘಟ್ಟ ಗ್ರಾಮದ ಎನ್.ಎಸ್. ವಿಕಾಸ್, ಹನುಮಂತಪುರದ ಎಚ್.ಆರ್. ಭರತ್ಗೌಡ, ಹನುಮಂತಪುರದ ಎಚ್.ಪಿ. ಹೇಮಂತ್ , ಯರಗನಹಳ್ಳಿಯ ವೈ.ಕೆ. ಚಂದನ್, ಹೆಮ್ಮನಹಳ್ಳಿಯ ಎಚ್.ಎಸ್. ಕುಮಾರ, ಹನುಮಂತಪುರದ ಎಚ್.ಆರ್. ನಿತ್ಯಾನಂದ ಹಾಗೂ ಹೆಮ್ಮನಹಳ್ಳಿಯ ಎಚ್.ಎಸ್. ಶ್ರೀನಿವಾಸ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. </p>.<p>ಎರಡೂ ಪ್ರಕರಣಗಳನ್ನು ಭೇದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>