ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ಕಿ ಚೀಲ ತುಂಬಿದ 12 ಚಕ್ರದ ಲಾರಿ ನಿಂತಿದ್ದ ಬಗ್ಗೆ ಸ್ಥಳೀಯರು ಪೊಲೀಸರಿಗೆ ಶನಿವಾರ ರಾತ್ರಿ ಮಾಹಿತಿ ನೀಡಿದ್ದರು. ಮಾಹಿತಿ ಆಧರಿಸಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳ ತಂಡದೊಂದಿಗೆ ಬಂದ ಪೊಲೀಸರು ಲಾರಿ ಜಪ್ತಿ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲೆಗೆ ಪಡಿತರ ಅಕ್ಕಿ ಕೊಂಡೊಯ್ಯಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.