<p><strong>ಮಂಡ್ಯ</strong>: ‘ಲೋಕಸಭೆಯಲ್ಲಿ ನಮ್ಮ ಪಕ್ಷಕ್ಕೆ ಮತ ನೀಡದಿದ್ದರೂ ಯಾವುದನ್ನು ಮನಸಿನಲ್ಲಿಟ್ಟುಕೊಳ್ಳದೆ ಬಸರಾಳು ಹೋಬಳಿಯನ್ನು ₹30 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಮಾಡುವ ಸಂಕಲ್ಪ ತೊಟ್ಟಿದ್ದೇನೆ’ ಎಂದು ಶಾಸಕ ಪಿ.ರವಿಕುಮಾರ್ ಭರವಸೆ ನೀಡಿದರು.</p>.<p>ತಾಲ್ಲೂಕಿನ ಬಸರಾಳು ಗ್ರಾಮದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ವಿರೋಧ ಪಕ್ಷದವರು ಕೇವಲ ಪೂಜೆ ಮಾಡಿ ಹೋಗುತ್ತಿದ್ದರು. ನಾವು ಉದ್ಘಾಟನೆ ಮಾಡುತ್ತಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ನೀವು ನಡೆದುಕೊಂಡಿದ್ದು ನನಗೆ ಇಷ್ಟ ಆಗಲಿಲ್ಲ. ಕೆಲಸ ಮಾಡುವವರಿಗೆ ಮತ ಹಾಕಬೇಕು. ಕೈಗೆ ಸಿಗದವರಿಗೆ ಮತ ಹಾಕಿದ್ದೀರಿ’ ಎಂದು ವಿಷಾದಿಸಿದರು.</p>.<p>₹ 2 ಕೋಟಿ ವೆಚ್ಚದಲ್ಲಿ ಕೃಷಿ ಭವನ, ₹ 7 ಕೋಟಿ ವೆಚ್ಚದಲ್ಲಿ ಹೇಮಾವತಿ ನಾಲಾ ಆಧುನೀಕರಣ, ಸಾರ್ವಜನಿಕ ಸ್ಮಶಾನಕ್ಕೆ ₹ 20 ಲಕ್ಷ, ಬಸರಾಳು ಗ್ರಾಮದಿಂದ ಮುತ್ತೇಗೆರೆ ಗ್ರಾಮಕ್ಕೆ ₹ 10 ಕೋಟಿ ವೆಚ್ಚದಲ್ಲಿ ರಸ್ತೆ ಆಧುನೀಕರಣ, ನಾಡ ಕಚೇರಿ ಮತ್ತು 50 ಬೆಡ್ ಆಸ್ಪತ್ರೆ ಯೋಜನೆ ಸಿದ್ಧತೆ, ₹ 25 ಲಕ್ಷ ವೆಚ್ಚದಲ್ಲಿ ಹೈಟೆಕ್ ಶೌಚಾಲಯ, ಎಸ್ಸಿ ಕಾಲೊನಿ ಅಭಿವೃದ್ಧಿಗೆ ₹ 25 ಲಕ್ಷ, ಬಸರಾಳು ಹೋಬಳಿ ಕೇಂದ್ರದ ರಸ್ತೆಗೆ ₹ 1 ಕೋಟಿ ಸೇರಿದಂತೆ ಬಸರಾಳು ಹೋಬಳಿಯ ಸಮಗ್ರ ಅಭಿವೃದ್ಧಿಗೆ ಒಟ್ಟು ₹ 30 ಕೋಟಿ ಅನುದಾನ ನೀಡಲಾಗುವುದು’ ಎಂದು ವಿವರಿಸಿದರು.</p>.<p>‘ಚಿಕ್ಕಮಂಡ್ಯ ಗ್ರಾಮದಿಂದ ಬಿಳಿದೆಗಲು ಗ್ರಾಮದವರೆಗೆ ಗುಂಡಿ ಬಿದ್ದಿರುವ ರಸ್ತೆಗೆ ₹ 10 ಕೋಟಿ ಮೀಸಲಿಡಲಾಗಿದೆ. ಮಳೆಗಾಲ ಕಳೆದ ತಕ್ಷಣ ಕಾಮಗಾರಿ ಆರಂಭವಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ‘ಲೋಕಸಭೆಯಲ್ಲಿ ನಮ್ಮ ಪಕ್ಷಕ್ಕೆ ಮತ ನೀಡದಿದ್ದರೂ ಯಾವುದನ್ನು ಮನಸಿನಲ್ಲಿಟ್ಟುಕೊಳ್ಳದೆ ಬಸರಾಳು ಹೋಬಳಿಯನ್ನು ₹30 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಮಾಡುವ ಸಂಕಲ್ಪ ತೊಟ್ಟಿದ್ದೇನೆ’ ಎಂದು ಶಾಸಕ ಪಿ.ರವಿಕುಮಾರ್ ಭರವಸೆ ನೀಡಿದರು.</p>.<p>ತಾಲ್ಲೂಕಿನ ಬಸರಾಳು ಗ್ರಾಮದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ವಿರೋಧ ಪಕ್ಷದವರು ಕೇವಲ ಪೂಜೆ ಮಾಡಿ ಹೋಗುತ್ತಿದ್ದರು. ನಾವು ಉದ್ಘಾಟನೆ ಮಾಡುತ್ತಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ನೀವು ನಡೆದುಕೊಂಡಿದ್ದು ನನಗೆ ಇಷ್ಟ ಆಗಲಿಲ್ಲ. ಕೆಲಸ ಮಾಡುವವರಿಗೆ ಮತ ಹಾಕಬೇಕು. ಕೈಗೆ ಸಿಗದವರಿಗೆ ಮತ ಹಾಕಿದ್ದೀರಿ’ ಎಂದು ವಿಷಾದಿಸಿದರು.</p>.<p>₹ 2 ಕೋಟಿ ವೆಚ್ಚದಲ್ಲಿ ಕೃಷಿ ಭವನ, ₹ 7 ಕೋಟಿ ವೆಚ್ಚದಲ್ಲಿ ಹೇಮಾವತಿ ನಾಲಾ ಆಧುನೀಕರಣ, ಸಾರ್ವಜನಿಕ ಸ್ಮಶಾನಕ್ಕೆ ₹ 20 ಲಕ್ಷ, ಬಸರಾಳು ಗ್ರಾಮದಿಂದ ಮುತ್ತೇಗೆರೆ ಗ್ರಾಮಕ್ಕೆ ₹ 10 ಕೋಟಿ ವೆಚ್ಚದಲ್ಲಿ ರಸ್ತೆ ಆಧುನೀಕರಣ, ನಾಡ ಕಚೇರಿ ಮತ್ತು 50 ಬೆಡ್ ಆಸ್ಪತ್ರೆ ಯೋಜನೆ ಸಿದ್ಧತೆ, ₹ 25 ಲಕ್ಷ ವೆಚ್ಚದಲ್ಲಿ ಹೈಟೆಕ್ ಶೌಚಾಲಯ, ಎಸ್ಸಿ ಕಾಲೊನಿ ಅಭಿವೃದ್ಧಿಗೆ ₹ 25 ಲಕ್ಷ, ಬಸರಾಳು ಹೋಬಳಿ ಕೇಂದ್ರದ ರಸ್ತೆಗೆ ₹ 1 ಕೋಟಿ ಸೇರಿದಂತೆ ಬಸರಾಳು ಹೋಬಳಿಯ ಸಮಗ್ರ ಅಭಿವೃದ್ಧಿಗೆ ಒಟ್ಟು ₹ 30 ಕೋಟಿ ಅನುದಾನ ನೀಡಲಾಗುವುದು’ ಎಂದು ವಿವರಿಸಿದರು.</p>.<p>‘ಚಿಕ್ಕಮಂಡ್ಯ ಗ್ರಾಮದಿಂದ ಬಿಳಿದೆಗಲು ಗ್ರಾಮದವರೆಗೆ ಗುಂಡಿ ಬಿದ್ದಿರುವ ರಸ್ತೆಗೆ ₹ 10 ಕೋಟಿ ಮೀಸಲಿಡಲಾಗಿದೆ. ಮಳೆಗಾಲ ಕಳೆದ ತಕ್ಷಣ ಕಾಮಗಾರಿ ಆರಂಭವಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>