ಬೆಂಗಳೂರಿನ ಕಡೆಯಿಂದ ಹಾಸನದ ಕಡೆಗೆ ಹೋಗುತ್ತಿದ್ದಾಗ ಬೆಳಗಿನ ಜಾವ 4.30 ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮಾಗಡಿ ತಾಲ್ಲೂಕಿನ ಲಕ್ಕೇನಹಳ್ಳಿಯ ಹೇಮಂತ್ ಕುಮಾರ್(22), ಶಿವಮೊಗ್ಗದ ಎನ್.ಎಂ.ಧೀರಜ್ (22), ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಚಂಡೂರಪುರ ಗ್ರಾಮದ ಪಿ.ಯೋಗೇಶ್ ಗೌಡ(23), ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕಂಪನಹಳ್ಳಿಯ ಕೆ.ಶರತ್ (22) ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.