ಫ್ರೆಂಚ್ ರಾಕ್ಸ್ ಲಯನ್ಸ್ ಕ್ಲಬ್ ಅಧ್ಯಕ್ಷ ಟಿ.ಪಿ.ರೇವಣ್ಣ ಮಾತನಾಡಿ, ‘ಸಾವು ಬದುಕಿನ ನಡುವೆ ಹೋರಾಡುವ ಹಲವು ಜೀವಗಳನ್ನು ಉಳಿಸುವ ನಿಟ್ಟಿನಲ್ಲಿ ರಕ್ತದಾನ ಮಹತ್ವದ್ದಾಗಿದೆ. ಪ್ರತಿಯೊಬ್ಬರು ರಕ್ತದಾನ ಮಾಡುವುದು ಪುಣ್ಯ ಕೆಲಸವಾಗಿದೆ. ನಿರ್ದಿಷ್ಟ ಕಾಲದಲ್ಲಿ ಪ್ರತಿಯೊಬ್ಬರು ರಕ್ತದಾನ ಮಾಡುವುದರಿಂದ ಆರೋಗ್ಯವಂತರಾಗಿರಬಹದು. ಜೊತೆಗೆ ಬಿ.ಪಿ, ಸಕ್ಕರೆ ಕಾಯಿಲೆಯಂತಹ ಹಲವು ರೋಗಗಳನ್ನು ತಡೆಗಟ್ಟಬಹುದಾಗಿದೆ. ಹೀಗಾಗಿ ಇಂತಹ ಶಿಬಿರದಲ್ಲಿ ಯುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡಬೇಕು’ ಎಂದು ಮನವಿ ಮಾಡಿದರು.