<p><strong>ಮಂಡ್ಯ: </strong>ಶ್ರೀಕ್ಷೇತ್ರ ಶ್ರವಣ ಬೆಳಗೊಳದ ಮಠಾಧೀಶ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ನೇತೃದಲ್ಲಿ ಮಹಾಮಸ್ತಕಾಭಿಷೇಕಕ್ಕಾಗಿ ನಡೆಯುವ ಪ್ರಚಾರ ಪ್ರಭಾವನಾ ರಥಯಾತ್ರೆಗೆ ಜಿಲ್ಲೆಯಲ್ಲಿ ಸ್ವಾಗತ ನೀಡಿರುವುದು ಸಂತೋಷ ಎಂದು ತಹಶೀಲ್ದಾರ್ ಎಲ್.ನಾಗೇಶ್ ಹೇಳಿದರು.</p>.<p>ನಗರದ ನಗರಸಭೆ ಬಳಿ ಗೊಮ್ಮಟೇಶ್ವರ ಭಗವಾನ್ ಬಾಹುಬಲಿಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವದ ನಿಮಿತ್ತ ರಾಜ್ಯದಾದ್ಯಂತ ಸಂಚರಿಸುತ್ತಿರುವ ಪ್ರಭಾವನಾ ರಥಯಾತ್ರೆಗೆ ಶನಿವಾರ ಸ್ವಾಗತ ಕೋರಿ ಅವರು ಮಾತನಾಡಿದರು.</p>.<p>ಎಸ್.ಡಿ.ಜೆ.ಎಂ.ಐ. ಮ್ಯಾನೇಜಿಂಗ್ ಕಮಿಟಿ ಟ್ರಸ್ಟ್ನ ಅಧ್ಯಕ್ಷರೂ ಆಗಿರುವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಸೇವೆ ಅನನ್ಯವಾದುದು. ಅವರ ಮಾರ್ಗದರ್ಶನದಲ್ಲಿ ಪ್ರಭಾವನಾ ರಥಯಾತ್ರೆ ನಡೆಯುತ್ತಿರುವುದು ಉತ್ತಮ ಕೆಲಸ ಆಗಿದೆ. ಇದು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.</p>.<p>ಗೊಮ್ಮಟೇಶ್ವರ ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವವು ಸಾವಿರಾರು ವರ್ಷಗಳಿಂದ ಪ್ರತಿ ಹನ್ನೆರಡು ವರ್ಷಕ್ಕೊಮ್ಮೆ ನಡೆಸಿಕೊಂಡು ಬರಲಾಗುತ್ತಿದೆ. ಅದರಂತೆ ಫೆಬ್ರವರಿ ತಿಂಗಳಿನಲ್ಲಿ ಮಹಾಮಸ್ತಕಾಭಿಷೇಕ ಮಹೋತ್ಸವವು ನಡೆಯಲಿದೆ ಎಂದರು.</p>.<p>ಮಹಾಮಸ್ತಕಾಭಿಷೇಕದ ಮಹೋತ್ಸವಕ್ಕೆ ಜಿಲ್ಲೆಯಿಂದ ಹೆಚ್ಚಿನ ಭಕ್ತಾಧಿಗಳು ಭಾಗವಹಿಸಬೇಕು ಎಂದು ಮನವಿ ಮಾಡಿದರು.</p>.<p>ನಗರಸಭೆ ಅಧ್ಯಕ್ಷ ಹೊಸಹಳ್ಳಿ ಬೋರೇಗೌಡ, ಮುಖಂಡರಾದ ಮಹೇಂದ್ರಬಾಬು ಜೈನ್, ಶಶಿಧರ್ ಜೈನ್, ಶಾಂತಿ ಪ್ರಸಾದ್ ಜೈನ್, ಶ್ರೀಧರ್ ಜೈನ್, ಎಂ.ವಿ.ಧರಣೇಂದ್ರಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>ಶ್ರೀಕ್ಷೇತ್ರ ಶ್ರವಣ ಬೆಳಗೊಳದ ಮಠಾಧೀಶ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ನೇತೃದಲ್ಲಿ ಮಹಾಮಸ್ತಕಾಭಿಷೇಕಕ್ಕಾಗಿ ನಡೆಯುವ ಪ್ರಚಾರ ಪ್ರಭಾವನಾ ರಥಯಾತ್ರೆಗೆ ಜಿಲ್ಲೆಯಲ್ಲಿ ಸ್ವಾಗತ ನೀಡಿರುವುದು ಸಂತೋಷ ಎಂದು ತಹಶೀಲ್ದಾರ್ ಎಲ್.ನಾಗೇಶ್ ಹೇಳಿದರು.</p>.<p>ನಗರದ ನಗರಸಭೆ ಬಳಿ ಗೊಮ್ಮಟೇಶ್ವರ ಭಗವಾನ್ ಬಾಹುಬಲಿಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವದ ನಿಮಿತ್ತ ರಾಜ್ಯದಾದ್ಯಂತ ಸಂಚರಿಸುತ್ತಿರುವ ಪ್ರಭಾವನಾ ರಥಯಾತ್ರೆಗೆ ಶನಿವಾರ ಸ್ವಾಗತ ಕೋರಿ ಅವರು ಮಾತನಾಡಿದರು.</p>.<p>ಎಸ್.ಡಿ.ಜೆ.ಎಂ.ಐ. ಮ್ಯಾನೇಜಿಂಗ್ ಕಮಿಟಿ ಟ್ರಸ್ಟ್ನ ಅಧ್ಯಕ್ಷರೂ ಆಗಿರುವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಸೇವೆ ಅನನ್ಯವಾದುದು. ಅವರ ಮಾರ್ಗದರ್ಶನದಲ್ಲಿ ಪ್ರಭಾವನಾ ರಥಯಾತ್ರೆ ನಡೆಯುತ್ತಿರುವುದು ಉತ್ತಮ ಕೆಲಸ ಆಗಿದೆ. ಇದು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.</p>.<p>ಗೊಮ್ಮಟೇಶ್ವರ ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವವು ಸಾವಿರಾರು ವರ್ಷಗಳಿಂದ ಪ್ರತಿ ಹನ್ನೆರಡು ವರ್ಷಕ್ಕೊಮ್ಮೆ ನಡೆಸಿಕೊಂಡು ಬರಲಾಗುತ್ತಿದೆ. ಅದರಂತೆ ಫೆಬ್ರವರಿ ತಿಂಗಳಿನಲ್ಲಿ ಮಹಾಮಸ್ತಕಾಭಿಷೇಕ ಮಹೋತ್ಸವವು ನಡೆಯಲಿದೆ ಎಂದರು.</p>.<p>ಮಹಾಮಸ್ತಕಾಭಿಷೇಕದ ಮಹೋತ್ಸವಕ್ಕೆ ಜಿಲ್ಲೆಯಿಂದ ಹೆಚ್ಚಿನ ಭಕ್ತಾಧಿಗಳು ಭಾಗವಹಿಸಬೇಕು ಎಂದು ಮನವಿ ಮಾಡಿದರು.</p>.<p>ನಗರಸಭೆ ಅಧ್ಯಕ್ಷ ಹೊಸಹಳ್ಳಿ ಬೋರೇಗೌಡ, ಮುಖಂಡರಾದ ಮಹೇಂದ್ರಬಾಬು ಜೈನ್, ಶಶಿಧರ್ ಜೈನ್, ಶಾಂತಿ ಪ್ರಸಾದ್ ಜೈನ್, ಶ್ರೀಧರ್ ಜೈನ್, ಎಂ.ವಿ.ಧರಣೇಂದ್ರಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>