ಜಿಲ್ಲೆಯ ಶಿರಹಟ್ಟಿ, ನರಗುಂದ ಹಾಗೂ ರೋಣ ಕ್ಷೇತ್ರದಲ್ಲಿ ರಾಮಣ್ಣ ಲಮಾಣಿ, ಸಿ.ಸಿ. ಪಾಟೀಲ ಹಾಗೂ ಕಳಕಪ್ಪ ಬಂಡಿ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಸರ್ಕಾರ ರಚನೆಯಾದರೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಆಪ್ತರಾಗಿರುವ ಸಿ.ಸಿ. ಪಾಟೀಲ ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಲೆಕ್ಕಾಚಾರ ಬಿಜೆಪಿ ವಲಯದಲ್ಲಿ ನಡೆಯುತ್ತಿದೆ.