ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಶಾಸಕ ಶ್ರೀರಾಮುಲು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಶನಿವಾರ ವಿಧಾನಸಭೆ ಅಧಿವೇಶದಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೂ ಮುನ್ನ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ಸಂಸದ ಸ್ಥಾನಕ್ಕೆ ರಾಜೀನಾಮೆ ತಲುಪಿಸಿದ್ದು, ಸ್ಪೀಕರ್ ರಾಜೀನಾಮೆ ಅಂಗೀಕರಿಸಿದ್ದಾರೆ.
ಶಿಕಾರಿಪುರದಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಮತ್ತು ಮೊಳಕಾಲ್ಮೂರು ಕ್ಷೇತ್ರದಲ್ಲಿ ಗೆಲುವು ಪಡೆದಿರುವ ಬಿ.ಶ್ರೀರಾಮುಲು ಬಳ್ಳಾರಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಸಿ.ಎಸ್.ಪುಟ್ಟರಾಜು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಈ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.
After winning assembly elections, B Sriramulu & BS Yeddyurappa have resigned from Lok Sabha, their resignations have been accepted by the Speaker. (file pics) #Karnatakapic.twitter.com/085VcK6jwv