2018ರ ವಿಧಾನಸಭಾ ಚುನಾವಣೆಯಲ್ಲಿ ಸ್ವರಾಜ್ ಇಂಡಿಯಾ ಪಕ್ಷ ಅಭ್ಯರ್ಥಿಯಾಗಿದ್ದ ಎಸ್.ಎಸ್.ಲಿಂಗೇಗೌಡ, ಪಕ್ಷೇತರವಾಗಿ ಸ್ಪರ್ಧಿಸಿದ್ದ ಕೆ.ಆರ್.ಶಿವಮಾದೇಗೌಡ (ಇಬ್ಬರೂ ಮದ್ದೂರು ಕ್ಷೇತ್ರ), ನಾಗಮಂಗಲ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿ.ಎಸ್.ಗೌಡ ಅವರನ್ನು ಅನರ್ಹಗೊಳಿಸಲಾಗಿದೆ. ಇವರ ಅನರ್ಹತೆ ಡಿ.2, 2021ರಿಂದ ಅನ್ವಯವಾಗಲಿದ್ದು ಡಿ.2, 2024ರವರೆಗೂ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಸೂಚಿಸಲಾಗಿದೆ.