‘ಅಯೋಧ್ಯೆ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಮೂರ್ತಿ ಬಹಿರಂಗಗೊಂಡಿಲ್ಲ. ರಾಮ, ಲಕ್ಷ್ಮಣ, ಸೀತೆ, ಹನುಮಂತ ಮೂರ್ತಿಗಳ ಜೊತೆ ಅರುಣ್ ಯೋಗಿರಾಜ್ ಇರುವ ಹಲವು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅವುಗಳಲ್ಲಿ ಮಂಡ್ಯ ರಾಮ ಮಂದಿರಕ್ಕಾಗಿ ಕೆತ್ತನೆ ಮಾಡಿರುವ ಮೂರ್ತಿಗಳಿವೆ’ ಎಂದು ಲೇಬರ್ ಕಾಲೊನಿ ರಾಮಮಂದಿರ ಟ್ರಸ್ಟ್ ಪದಾಧಿಕಾರಿಗಳು ತಿಳಿಸಿದರು.