ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬ್ಬಿನ ತರಗಿಗೆ ಹಚ್ಚಿದ್ದ ಬೆಂಕಿಗೆ ಸಿಲುಕಿ ರೈತ ಸಾವು

Last Updated 21 ಜನವರಿ 2021, 19:48 IST
ಅಕ್ಷರ ಗಾತ್ರ

ಕೆ.ಆರ್.ಪೇಟೆ (ಮಂಡ್ಯ): ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ಕಬ್ಬಿನ ಗದ್ದೆಯ ತರಗಿಗೆ ಬೆಂಕಿ ಹಾಕಲು ಹೋಗಿದ್ದ ರೈತ ನಿಂಗೇಗೌಡ (71), ಎಡವಿ ಬಿದ್ದು ಬೆಂಕಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಗದ್ದೆಯಲ್ಲಿದ್ದ ಕಬ್ಬನ್ನು ಈಚೆಗೆ ಕಟಾವು ಮಾಡಲಾಗಿತ್ತು. ಗದ್ದೆಯಲ್ಲಿದ್ದ ತರಗು ಮತ್ತು ಗೆಡ್ಡೆಗೆ ಬೆಂಕಿ ಹಚ್ಚಲು ನಿಂಗೇಗೌಡ ಅವರು ಬುಧವಾರ ಸಂಜೆಯೇ ಮನೆಯಿಂದ ತೆರಳಿದ್ದರು. ತರಗನ್ನು ಒಗ್ಗೂಡಿಸಿ ಬೆಂಕಿ ಹಚ್ಚಿ, ಗದ್ದೆಯಿಂದ ಹೊರಗೆ ಬರುವಾಗ ಎಡವಿ ಬಿದ್ದಿದ್ದಾಗಿ ತಿಳಿದುಬಂದಿದೆ.

ಸ್ಥಳಕ್ಕೆ ತಹಶೀಲ್ದಾರ್ ಎಂ.ಶಿವಮೂರ್ತಿ, ಎಸ್ಐ ಬ್ಯಾಟರಾಯೀಗೌಡ, ರಾಜಸ್ವ ನಿರೀಕ್ಷಕ ನರೇಂದ್ರ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT