ಮದ್ದೂರು: ಶಾಸಕ ಡಿ.ಕೆ.ಶಿವಕುಮಾರ್ ಪಟ್ಟಣಕ್ಕೆ ಬಂದು ಗ್ರಾಮದೇವತೆ ಮದ್ದೂರಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಕಾರ್ಯಕ್ರಮಕ್ಕೆ ಸಂಬಂಧಪಟ್ಟಂತೆ ಸಾರ್ವಜನಿಕವಾಗಿ ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ಹಾಗೂ ಪಟ್ಟಣದಲ್ಲಿ ಅವರು ಬರುವುದಕ್ಕೂ ಮುನ್ನ ಪ್ರಚಾರಕ್ಕಾಗಿ ಭಾರಿ ಧ್ವನಿವರ್ಧಕವನ್ನು ಹಾಕಿಕೊಂಡು ಹೋಗುತ್ತಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದರು.