<p><strong>ಮೇಲುಕೋಟೆ</strong>: ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಅಂಗವಾಗಿ ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯದಲ್ಲಿ ಅಂಗಮಣಿ ಉತ್ಸವ ವೈಭವದಿಂದ ಶುಕ್ರವಾರ ನೆರವೇರಿತು.</p>.<p>ಸ್ವಾಮಿಯ ಅರಸಿಯರಾದ ಶ್ರೀದೇವಿ, ಭೂದೇವಿಗೆ ತವರು ಮನೆಯಾದ ಸಜ್ಜೆಹಟ್ಟಿ ಮಂಟಪದಲ್ಲಿ ಅಂಗಮಣಿ ಉತ್ಸವ ಪ್ರಯುಕ್ತ ಮಡಿಲು ತುಂಬುವ ಸಂಪ್ರದಾಯ ಪ್ರತಿ ವರ್ಷದಂತೆ ಈ ಬಾರಿಯೂ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.</p>.<p>ಮೇಲುಕೋಟೆಯ ಸ್ಥಾನೀಕ ಕರಗಂ ನಾರಾಯಣ ಅಯ್ಯಂಗಾರ್ ಮತ್ತು ಸ್ಥಾನೀಕರಾದ ಸಜ್ಜೆಹಟ್ಟಿ ತಿರುನಾರಾಯಣ ಅಯ್ಯಂಗಾರ್<br>ಅವರ ಮನೆಗಳಲ್ಲಿ ಏಕಕಾಲದಲ್ಲಿ ಶುಕ್ರವಾರ ಸಂಜೆ ದೇಶದ ಪ್ರಖ್ಯಾತ ಹಣ್ಣುಗಳನ್ನು ತಂದು ನೂರಾರು ತಟ್ಟೆಗಳಲ್ಲಿ ಜೋಡಿಸಿ ಸಂಜೆ 6 ಗಂಟೆಯ ನಂತರ ದೇವಿಯರಿಗೆ ಅರ್ಪಿಸಲಾಯಿತು. ಹಣ್ಣುಗಳ ತಟ್ಟಿಯನ್ನು ವೀಕ್ಷಿಸಲು ರಾತ್ರಿ 9 ಗಂಟೆಯವರೆಗೂ ಅವಕಾಶ ಮಾಡಿಕೊಡಲಾಯಿತು.</p>.<p>ಮಹೋತ್ಸವದ ಪ್ರಯುಕ್ತ ಬೆಳಿಗ್ಗೆ 11 ಗಂಟೆಗೆ ಶ್ರೀದೇವಿ ಭೂದೇವಿಯರಿಗೆ ಶ್ರೀಸೂಕ್ತ ಪಾರಾಯಣದೊಂದಿಗೆ ಅಭಿಷೇಕ ನೆರವೇರಿಸಲಾಯಿತು. ನಂತರ ದೇವಿಯರ ಉತ್ಸವ ನೆರವೇರಿಸಿ ಪಂಚ ಕಲ್ಯಾಣಿ ಮಾತೆಗೆ ಪೂಜೆ ನೆರವೇರಿಸಲಾಯಿತು. </p>.<p><strong>ದರ್ಶನಕ್ಕೆ ಅವಕಾಶ:</strong> ಚೆಲುವನಾರಾಯಣ ಸ್ವಾಮಿಯ ಅರಸಿಯರಾದ ಶ್ರೀದೇವಿ-ಭೂದೇವಿ ಅಮ್ಮನವರಿಗೆ ಅತ್ಯಮೂಲ್ಯ ಹಣ್ಣುಗಳಿಂದ ಮಡಿಲು ತುಂಬಿ ಮಹಾಮಂಗಳಾರತಿ ನೆರವೇರಿಸಲಾಯಿತು. ಸಂಜೆ 5 ಗಂಟೆಯಿಂದಲೇ ತಂಡೋಪತಂಡವಾಗಿ ಬರುತ್ತಿದ್ದ ನೂರಾರು ಸಂಖ್ಯೆಯ ಭಕ್ತರು ಹೂವು, ಹಣ್ಣುಗಳ ತಟ್ಟೆ ವೀಕ್ಷಣೆ ಮಾಡಿದರು. ದೇವಾಲಯ ಅರ್ಚಕರು, ಸ್ಥಾನೀಕರು, ವಿದ್ವಾಂಸರು ಹಾಗೂ ದೇವಾಲಯದ ಕಾರ್ಯನಿರ್ವಾಹಕಾಧಿಕಾರಿ ಶೀಲಾ ಪಾಲ್ಗೊಂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೇಲುಕೋಟೆ</strong>: ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಅಂಗವಾಗಿ ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯದಲ್ಲಿ ಅಂಗಮಣಿ ಉತ್ಸವ ವೈಭವದಿಂದ ಶುಕ್ರವಾರ ನೆರವೇರಿತು.</p>.<p>ಸ್ವಾಮಿಯ ಅರಸಿಯರಾದ ಶ್ರೀದೇವಿ, ಭೂದೇವಿಗೆ ತವರು ಮನೆಯಾದ ಸಜ್ಜೆಹಟ್ಟಿ ಮಂಟಪದಲ್ಲಿ ಅಂಗಮಣಿ ಉತ್ಸವ ಪ್ರಯುಕ್ತ ಮಡಿಲು ತುಂಬುವ ಸಂಪ್ರದಾಯ ಪ್ರತಿ ವರ್ಷದಂತೆ ಈ ಬಾರಿಯೂ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.</p>.<p>ಮೇಲುಕೋಟೆಯ ಸ್ಥಾನೀಕ ಕರಗಂ ನಾರಾಯಣ ಅಯ್ಯಂಗಾರ್ ಮತ್ತು ಸ್ಥಾನೀಕರಾದ ಸಜ್ಜೆಹಟ್ಟಿ ತಿರುನಾರಾಯಣ ಅಯ್ಯಂಗಾರ್<br>ಅವರ ಮನೆಗಳಲ್ಲಿ ಏಕಕಾಲದಲ್ಲಿ ಶುಕ್ರವಾರ ಸಂಜೆ ದೇಶದ ಪ್ರಖ್ಯಾತ ಹಣ್ಣುಗಳನ್ನು ತಂದು ನೂರಾರು ತಟ್ಟೆಗಳಲ್ಲಿ ಜೋಡಿಸಿ ಸಂಜೆ 6 ಗಂಟೆಯ ನಂತರ ದೇವಿಯರಿಗೆ ಅರ್ಪಿಸಲಾಯಿತು. ಹಣ್ಣುಗಳ ತಟ್ಟಿಯನ್ನು ವೀಕ್ಷಿಸಲು ರಾತ್ರಿ 9 ಗಂಟೆಯವರೆಗೂ ಅವಕಾಶ ಮಾಡಿಕೊಡಲಾಯಿತು.</p>.<p>ಮಹೋತ್ಸವದ ಪ್ರಯುಕ್ತ ಬೆಳಿಗ್ಗೆ 11 ಗಂಟೆಗೆ ಶ್ರೀದೇವಿ ಭೂದೇವಿಯರಿಗೆ ಶ್ರೀಸೂಕ್ತ ಪಾರಾಯಣದೊಂದಿಗೆ ಅಭಿಷೇಕ ನೆರವೇರಿಸಲಾಯಿತು. ನಂತರ ದೇವಿಯರ ಉತ್ಸವ ನೆರವೇರಿಸಿ ಪಂಚ ಕಲ್ಯಾಣಿ ಮಾತೆಗೆ ಪೂಜೆ ನೆರವೇರಿಸಲಾಯಿತು. </p>.<p><strong>ದರ್ಶನಕ್ಕೆ ಅವಕಾಶ:</strong> ಚೆಲುವನಾರಾಯಣ ಸ್ವಾಮಿಯ ಅರಸಿಯರಾದ ಶ್ರೀದೇವಿ-ಭೂದೇವಿ ಅಮ್ಮನವರಿಗೆ ಅತ್ಯಮೂಲ್ಯ ಹಣ್ಣುಗಳಿಂದ ಮಡಿಲು ತುಂಬಿ ಮಹಾಮಂಗಳಾರತಿ ನೆರವೇರಿಸಲಾಯಿತು. ಸಂಜೆ 5 ಗಂಟೆಯಿಂದಲೇ ತಂಡೋಪತಂಡವಾಗಿ ಬರುತ್ತಿದ್ದ ನೂರಾರು ಸಂಖ್ಯೆಯ ಭಕ್ತರು ಹೂವು, ಹಣ್ಣುಗಳ ತಟ್ಟೆ ವೀಕ್ಷಣೆ ಮಾಡಿದರು. ದೇವಾಲಯ ಅರ್ಚಕರು, ಸ್ಥಾನೀಕರು, ವಿದ್ವಾಂಸರು ಹಾಗೂ ದೇವಾಲಯದ ಕಾರ್ಯನಿರ್ವಾಹಕಾಧಿಕಾರಿ ಶೀಲಾ ಪಾಲ್ಗೊಂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>