<p><strong>ಕೆ.ಆರ್.ಪೇಟೆ:</strong> ವಿಧಾನ ಪರಿಷತ್ ಪದವೀಧರರ ಕ್ಷೇತ್ರದ ರಾಜ್ಯ ರೈತ ಸಂಘದ ಅಭ್ಯರ್ಥಿ ಪ್ರಸನ್ನ ಎನ್.ಗೌಡ ಪಟ್ಟಣದಲ್ಲಿ ಮತಯಾಚನೆ ಮಾಡಿದರು.</p>.<p>‘ಚುನಾವಣೆಯ ಹಿನ್ನೆಲೆಯಲ್ಲಿ 85 ಸಾವಿರ ಮತದಾರರ ನೋಂದಣಿ ಮಾಡಿಸಿದ್ದೇನೆ. ಅನೇಕರು ಸದ್ಯದ ರಾಜಕೀಯ ವ್ಯವಸ್ಥೆ ಸರಿಯಾಗಬೇಕು ಎನ್ನುವ ಭಾವನೆ ಹೊಂದಿದ್ದಾರೆ. ಹಣ ಬಲದ ರಾಜಕಾರಣ ಪ್ರಜಾ ಪ್ರಭುತ್ವ ವ್ಯವಸ್ಥೆಯನ್ನು ಭ್ರಷ್ಟಗೊಳಿಸುತ್ತಿದ್ದಾರೆ. ಇದನ್ನು ಬದಲಿಸಲು ಪ್ರತಿಯೊಬ್ಬ ಮತದಾರ ಪಣತೊಡಬೇಕು. ಪದವೀಧರರ ನೈಜ ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸಲು ಸಿದ್ಧನಿದ್ದೇನೆ. ನನಗೆ ಮೊದಲ ಪ್ರಾಸಶ್ತ್ಯದ ಮತ ನೀಡಬೇಕು’ ಎಂದು ಹೇಳಿದರು.</p>.<p>‘ದೇಶದಲ್ಲಿ ಬಂಡವಾಳಶಾಹಿಗಳು ವಿಜೃಂಭಿಸುತ್ತಿದ್ದಾರೆ. ನಿರುದ್ಯೋಗಿಗಳು, ರೈತರು, ಕಾರ್ಮಿಕರು, ಅಸಂಘಟಿತ ವಲಯದವರು ಕಡೆಗಣಿಸಲ್ಪಟ್ಟಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಜಿಲ್ಲಾ ರೈತ ಸಂಘದ ಮಾಜಿ ಅಧ್ಯಕ್ಷ ಎಂ.ವಿ.ರಾಜೇಗೌಡ, ತಾಲ್ಲೂಕು ರೈತ ಮುಖಂಡರಾದ ಎಲ್.ಬಿ.ಜಗದೀಶ್, ಮುದ್ದುಕುಮಾರ್, ನಾಗೇಗೌಡ, ನಾಗರಾಜು, ಕೃಷ್ಣೇಗೌಡ, ಕರೋಟಿ ತಮ್ಮಯ್ಯ, ನಾರಾಯಣ ಸ್ವಾಮಿ, ಕೇಶವಮೂರ್ತಿ, ಬಸವರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪೇಟೆ:</strong> ವಿಧಾನ ಪರಿಷತ್ ಪದವೀಧರರ ಕ್ಷೇತ್ರದ ರಾಜ್ಯ ರೈತ ಸಂಘದ ಅಭ್ಯರ್ಥಿ ಪ್ರಸನ್ನ ಎನ್.ಗೌಡ ಪಟ್ಟಣದಲ್ಲಿ ಮತಯಾಚನೆ ಮಾಡಿದರು.</p>.<p>‘ಚುನಾವಣೆಯ ಹಿನ್ನೆಲೆಯಲ್ಲಿ 85 ಸಾವಿರ ಮತದಾರರ ನೋಂದಣಿ ಮಾಡಿಸಿದ್ದೇನೆ. ಅನೇಕರು ಸದ್ಯದ ರಾಜಕೀಯ ವ್ಯವಸ್ಥೆ ಸರಿಯಾಗಬೇಕು ಎನ್ನುವ ಭಾವನೆ ಹೊಂದಿದ್ದಾರೆ. ಹಣ ಬಲದ ರಾಜಕಾರಣ ಪ್ರಜಾ ಪ್ರಭುತ್ವ ವ್ಯವಸ್ಥೆಯನ್ನು ಭ್ರಷ್ಟಗೊಳಿಸುತ್ತಿದ್ದಾರೆ. ಇದನ್ನು ಬದಲಿಸಲು ಪ್ರತಿಯೊಬ್ಬ ಮತದಾರ ಪಣತೊಡಬೇಕು. ಪದವೀಧರರ ನೈಜ ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸಲು ಸಿದ್ಧನಿದ್ದೇನೆ. ನನಗೆ ಮೊದಲ ಪ್ರಾಸಶ್ತ್ಯದ ಮತ ನೀಡಬೇಕು’ ಎಂದು ಹೇಳಿದರು.</p>.<p>‘ದೇಶದಲ್ಲಿ ಬಂಡವಾಳಶಾಹಿಗಳು ವಿಜೃಂಭಿಸುತ್ತಿದ್ದಾರೆ. ನಿರುದ್ಯೋಗಿಗಳು, ರೈತರು, ಕಾರ್ಮಿಕರು, ಅಸಂಘಟಿತ ವಲಯದವರು ಕಡೆಗಣಿಸಲ್ಪಟ್ಟಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಜಿಲ್ಲಾ ರೈತ ಸಂಘದ ಮಾಜಿ ಅಧ್ಯಕ್ಷ ಎಂ.ವಿ.ರಾಜೇಗೌಡ, ತಾಲ್ಲೂಕು ರೈತ ಮುಖಂಡರಾದ ಎಲ್.ಬಿ.ಜಗದೀಶ್, ಮುದ್ದುಕುಮಾರ್, ನಾಗೇಗೌಡ, ನಾಗರಾಜು, ಕೃಷ್ಣೇಗೌಡ, ಕರೋಟಿ ತಮ್ಮಯ್ಯ, ನಾರಾಯಣ ಸ್ವಾಮಿ, ಕೇಶವಮೂರ್ತಿ, ಬಸವರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>