<p><strong>ಮಳವಳ್ಳಿ:</strong> ಸರ್ಕಾರಿ ಬಸ್ನಲ್ಲಿ ಪ್ರಯಾಣಿಸುವ ವೇಳೆ ತಾಯಿಯೊಬ್ಬರಿಂದ ಮಗು ಪಡೆದುಕೊಂಡ ಅಪರಿಚಿತ ಮಹಿಳೆ ಮಗುವಿನೊಂದಿಗೆ ಪರಾರಿಯಾಗಿದ್ದಾರೆ</p>.<p>ತಿ.ನರಸೀಪುರ ತಾಲ್ಲೂಕಿನ ವಡ್ಡರಕೊಪ್ಪಲಿನ ಶಿವಕುಮಾರ್ ಅವರ ಪತ್ನಿ ಸವಿತಾ ಅವರು ಮಗು ಕಳೆದುಕೊಂಡವರು. ಸೋಮವಾರ ಸಂಜೆ ತಿ.ನರಸೀಪುರಕ್ಕೆ ತೆರಳಲು ಚನ್ನಪಟ್ಟಣದ ಬಸ್ ನಿಲ್ದಾಣದಲ್ಲಿ ಮಗುವಿನೊಂದಿಗೆ ಬಸ್ ಹತ್ತಿದ್ದರು. ಈ ವೇಳೆ ಬಸ್ನಲ್ಲಿ ಜನಸಂದಣಿ ಹೆಚ್ಚಿತ್ತು. ಈ ವೇಳೆ ಸೀಟ್ನಲ್ಲಿ ಕೂತಿದ್ದ ಅಪರಿಚಿತ ಮಹಿಳೆ ಮಗು ಕೂರಿಸಿಕೊಳ್ಳಲು ಪಡೆದುಕೊಂಡಿದ್ದಾರೆ.</p>.<p>ಮಳವಳ್ಳಿ ಪಟ್ಟಣದ ನಿಲ್ದಾಣದಲ್ಲಿ ಬಸ್ನಿಂದ ಇಳಿಯುವ ಸವಿತಾ ಮುಂದಾದಾಗ ಆ ಅಪರಿಚಿತ ಮಹಿಳೆಯೂ ಸಹ ಇಳಿಯುವ ನಾಟಕವಾಡಿದ್ದು, ಕೆಲವೇ ಕ್ಷಣದಲ್ಲಿ ಅಲ್ಲಿಂದ ನಾಪತ್ತೆಯಾಗಿದ್ದಾರೆ. ಇದರಿಂದ ಆತಂಕಗೊಂಡ ಸವಿತಾ ಮಗು ಕಾಣದೇ ಕಣ್ಣೀರು ಹಾಕಿದ್ದಾರೆ. ಮಾಹಿತಿ ಪಡೆದ ಪಟ್ಟಣದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಹುಡುಕಾಟ ನಡೆಸಿದ್ದಾರೆ.</p>.<p>ಯಾವುದೇ ಸುಳಿವು ಪತ್ತೆಯಾಗದ ಕಾರಣ ಠಾಣೆಗೆ ಕರೆದುಕೊಂಡು ಹೋಗಿ ಪ್ರಕರಣ ದಾಖಲಿಸಿದ್ದಾರೆ.</p>.<p>ಪತ್ತೆಗೆ ಮನವಿ: ಪ್ರಕರಣ ದಾಖಲಿಸಿದ ಪೊಲೀಸರು ಅಪರಿಚಿತ ಮಹಿಳೆ ಹಾಗೂ ಕಾಣೆಯಾದ ಮಗುವಿನ ಪತ್ತೆಗೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ:</strong> ಸರ್ಕಾರಿ ಬಸ್ನಲ್ಲಿ ಪ್ರಯಾಣಿಸುವ ವೇಳೆ ತಾಯಿಯೊಬ್ಬರಿಂದ ಮಗು ಪಡೆದುಕೊಂಡ ಅಪರಿಚಿತ ಮಹಿಳೆ ಮಗುವಿನೊಂದಿಗೆ ಪರಾರಿಯಾಗಿದ್ದಾರೆ</p>.<p>ತಿ.ನರಸೀಪುರ ತಾಲ್ಲೂಕಿನ ವಡ್ಡರಕೊಪ್ಪಲಿನ ಶಿವಕುಮಾರ್ ಅವರ ಪತ್ನಿ ಸವಿತಾ ಅವರು ಮಗು ಕಳೆದುಕೊಂಡವರು. ಸೋಮವಾರ ಸಂಜೆ ತಿ.ನರಸೀಪುರಕ್ಕೆ ತೆರಳಲು ಚನ್ನಪಟ್ಟಣದ ಬಸ್ ನಿಲ್ದಾಣದಲ್ಲಿ ಮಗುವಿನೊಂದಿಗೆ ಬಸ್ ಹತ್ತಿದ್ದರು. ಈ ವೇಳೆ ಬಸ್ನಲ್ಲಿ ಜನಸಂದಣಿ ಹೆಚ್ಚಿತ್ತು. ಈ ವೇಳೆ ಸೀಟ್ನಲ್ಲಿ ಕೂತಿದ್ದ ಅಪರಿಚಿತ ಮಹಿಳೆ ಮಗು ಕೂರಿಸಿಕೊಳ್ಳಲು ಪಡೆದುಕೊಂಡಿದ್ದಾರೆ.</p>.<p>ಮಳವಳ್ಳಿ ಪಟ್ಟಣದ ನಿಲ್ದಾಣದಲ್ಲಿ ಬಸ್ನಿಂದ ಇಳಿಯುವ ಸವಿತಾ ಮುಂದಾದಾಗ ಆ ಅಪರಿಚಿತ ಮಹಿಳೆಯೂ ಸಹ ಇಳಿಯುವ ನಾಟಕವಾಡಿದ್ದು, ಕೆಲವೇ ಕ್ಷಣದಲ್ಲಿ ಅಲ್ಲಿಂದ ನಾಪತ್ತೆಯಾಗಿದ್ದಾರೆ. ಇದರಿಂದ ಆತಂಕಗೊಂಡ ಸವಿತಾ ಮಗು ಕಾಣದೇ ಕಣ್ಣೀರು ಹಾಕಿದ್ದಾರೆ. ಮಾಹಿತಿ ಪಡೆದ ಪಟ್ಟಣದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಹುಡುಕಾಟ ನಡೆಸಿದ್ದಾರೆ.</p>.<p>ಯಾವುದೇ ಸುಳಿವು ಪತ್ತೆಯಾಗದ ಕಾರಣ ಠಾಣೆಗೆ ಕರೆದುಕೊಂಡು ಹೋಗಿ ಪ್ರಕರಣ ದಾಖಲಿಸಿದ್ದಾರೆ.</p>.<p>ಪತ್ತೆಗೆ ಮನವಿ: ಪ್ರಕರಣ ದಾಖಲಿಸಿದ ಪೊಲೀಸರು ಅಪರಿಚಿತ ಮಹಿಳೆ ಹಾಗೂ ಕಾಣೆಯಾದ ಮಗುವಿನ ಪತ್ತೆಗೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>