ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ: ಸಂತ್ರಸ್ತೆಯರಿಗೆ ನ್ಯಾಯ ಒದಗಿಸಿ

Last Updated 15 ಏಪ್ರಿಲ್ 2018, 20:03 IST
ಅಕ್ಷರ ಗಾತ್ರ

ಲಂಡನ್‌: ಭಾರತದ ವಿವಿಧ ರಾಜ್ಯಗಳಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣಗಳಲ್ಲಿನ ಸಂತ್ರಸ್ತೆಯರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಠಿಣ ಕ್ರಮಕೈಗೊಳ್ಳುವಂತೆ ಲಂಡನ್‌ನಲ್ಲಿರುವ ಭಾರತದ ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಮೋದಿ ಅವರ ನಾಲ್ಕು ದಿನಗಳ ಲಂಡನ್‌ ಭೇಟಿ ಹಿನ್ನೆಲೆಯಲ್ಲಿ ‘ದಿ ನ್ಯಾಷನಲ್‌ ಇಂಡಿಯನ್‌ ಸ್ಟೂಡೆಂಟ್ಸ್‌’ (ಎನ್‌ಐಎಸ್‌ಎಯು) ಮತ್ತು ಹಳೆಯ ವಿದ್ಯಾರ್ಥಿಗಳ ಸಂಘ ಸೇರಿದಂತೆ 19ಕ್ಕೂ ಹೆಚ್ಚು ಭಾರತ ಮೂಲದ ಸಂಸ್ಥೆಗಳು ಲಂಡನ್‌ನಲ್ಲಿನ ಭಾರತದ ಹೈಕಮಿಷನ್‌ ಕಚೇರಿಗೆ ತೆರಳಿ ಪತ್ರವನ್ನು ನೀಡಿದ್ದಾರೆ.

‘ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶ, ಗುಜರಾತ್‌ನಲ್ಲಿ ಈಚೆಗೆ ನಡೆದ ಅತ್ಯಾಚಾರ ಪ್ರಕರಣಗಳ ಸಂಬಂಧ ಕಠಿಣವಾದ ನಿರ್ಧಾರ ಕೈಗೊಳ್ಳಬೇಕು’ ಎಂದು ವಿದ್ಯಾರ್ಥಿಗಳು ಪತ್ರದಲ್ಲಿ ಆಗ್ರಹಿಸಿದ್ದಾರೆ.

‘ಬುಧವಾರ ಇಲ್ಲಿ ಆಯೋಜಿಸಿರುವ ‘ಭಾರತ್‌ ಕಿ ಬಾತ್‌ ಸಬ್‌ ಕೆ ಸಾತ್‌’ (ಎಲ್ಲರೊಂದಿಗೆ ಭಾರತದ ಮಾತು) ಕಾರ್ಯಕ್ರಮ ಉದ್ದೇಶಿಸಿ ತಾವು ಮಾತನಾಡಲಿದ್ದೀರಿ. ಪ್ರಕರಣಗಳಿಗೆ ಸಂಬಂಧಿಸಿದಂತೆ ಯಾವ ಬಗೆಯ ಕ್ರಮ ಕೈಗೊಳ್ಳುವಿರಿ ಎಂಬುದನ್ನು ಅಂದು ಘೋಷಿಸಬೇಕು’ ಎಂದು ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT