ಭದ್ರಾವತಿ ತರುಣ್ (17) ಮೃತಪಟ್ಟ ಬಾಲಕ. ಬೆಂಗಳೂರಿನಲ್ಲಿ ವಾಸವಿರುವ ಆತ, ತನ್ನ ಚಿಕ್ಕಪ್ಪನ ಅಸ್ತಿಯನ್ನು ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಬಿಟ್ಟು ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ. ಮದ್ದೂರಿನ ಶಿವಪುರದಲ್ಲಿ ಟೀ ಕುಡಿಯಲೆಂದು ಕಾರು ನಿಲ್ಲಿಸಿ ಮೈಸೂರು–ಬೆಂಗಳೂರು ಹೆದ್ದಾರಿಯನ್ನು ದಾಟುತ್ತಿದ್ದಾಗ ರಾತ್ರಿ 7 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮದ್ದೂರು ಸಂಚಾರ ಠಾಣೆ ಪೊಲೀಸರು ಬೊಲೆರೋ ವಾಹನವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.