ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ರಸ್ತೆ ದಾಟುತ್ತಿದ್ದ ಬಾಲಕ ಸಾವು

Last Updated 7 ಅಕ್ಟೋಬರ್ 2020, 3:36 IST
ಅಕ್ಷರ ಗಾತ್ರ

ಮದ್ದೂರು: ರಸ್ತೆ ದಾಟುತ್ತಿದ್ದ ಬಾಲಕನಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ಶಿವಪುರದಲ್ಲಿ ನಡೆದಿದೆ.

ಭದ್ರಾವತಿ ತರುಣ್ (17) ಮೃತಪಟ್ಟ ಬಾಲಕ. ಬೆಂಗಳೂರಿನಲ್ಲಿ ವಾಸವಿರುವ ಆತ, ತನ್ನ ಚಿಕ್ಕಪ್ಪನ ಅಸ್ತಿಯನ್ನು ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಬಿಟ್ಟು ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ. ಮದ್ದೂರಿನ ಶಿವಪುರದಲ್ಲಿ ಟೀ ಕುಡಿಯಲೆಂದು ಕಾರು ನಿಲ್ಲಿಸಿ ಮೈಸೂರು–ಬೆಂಗಳೂರು ಹೆದ್ದಾರಿಯನ್ನು ದಾಟುತ್ತಿದ್ದಾಗ ರಾತ್ರಿ 7 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮದ್ದೂರು ಸಂಚಾರ ಠಾಣೆ ಪೊಲೀಸರು ಬೊಲೆರೋ ವಾಹನವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT