ಮಧ್ಯಾಹ್ನ 12ರ ಸುಮಾರಿಗೆ ನೀಲಗಿರಿ ತೋಪಿಗೆ ಬೆಂಕಿ ಬಿದ್ದಿದ್ದು, ಬೆಂಕಿ ತೀವ್ರತೆಗೆ ಗಗನದೆತ್ತರಕ್ಕೆ ಹೊಗೆ ಹರಡಿತ್ತು. ಇದನ್ನು ಕಂಡ ಅಕ್ಕಪಕ್ಕದ ಜಮೀನಿನ ರೈತರು ಬೆಂಕಿ ನಂದಿಸಲು ಮುಂದಾಗಿದ್ದಾರೆ. ಬಿಸಿಲು ಹೆಚ್ಚಿದ್ದರಿಂದ ಹಾಗೂ ತೋಪಿನಲ್ಲಿ ನೆಲದಲ್ಲಿ ಹರಡಿದ್ದ ಮರದ ಎಲೆಗಳಿಗೆ ಬೆಂಕಿ ಜ್ವಾಲೆ ಹರಡಿದ್ದರಿಂದ ಬೆಂಕಿ ನಂದಿಸಲು ಸಾಧ್ಯವಾಗಿಲ್ಲ. ತಕ್ಷಣವೇ ಜಮೀನಿನ ಮಾಲೀಕರಾದ ಪುಟ್ಟೇಗೌಡ್ರು ಸಿದ್ದರಾಮು ಅವರಿಗೆ ವಿಚಾರ ಮುಟ್ಟಿಸಿದ್ದಾರೆ.