ತಾಲ್ಲೂಕಿನ ನಾಗತಿಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದ ನಾಗತಿಹಳ್ಳಿ ಸಂಸ್ಕೃತಿ ಹಬ್ಬದ 17ನೇ ವಾರ್ಷಿಕೋತ್ಸವದಲ್ಲಿ ಗ್ರಾಮ ಮತ್ತು ರೈತರ ಅಭಿವೃದ್ಧಿಗೆ ಇಲಾಖೆಯಿಂದ ಸಿಗುವ ಸೌಲಭ್ಯಗಳೇನು? ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಲು ರೈತರು ಅನುಸರಿಸಬೇಕಾದ ವಿಧಾನಗಳು ಕುರಿತ ಸಂವಾದದಲ್ಲಿ ಮಾತನಾಡಿದ ಅವರು, ‘ಓದು ಒಕ್ಕಾಲು ಬುದ್ಧಿ ಮುಕ್ಕಲು’ ಎಂಬ ಗಾದೆಯಂತೆ ಶಿಕ್ಷಣ ಪಡೆದವರು, ಪಡೆಯದವರು ಸಹ ಜೀವನ ಕೌಶಲ ಬೆಳೆಸಿಕೊಳ್ಳುವುದು ಮುಖ್ಯವಾಗಿದೆ. ಗ್ರಾಮೀಣ ಭಾಗದಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವ ಕೆಲಸ ಮಾಡಬೇಕಾಗುತ್ತದೆ. ಗ್ರಾಮದಲ್ಲಿ ನಿರ್ಮಾಣವಾಗಿರುವ ಶಾಲೆ, ಗ್ರಂಥಾಲಯ, ರಂಗಮಂದಿರ ಸೇರಿದಂತೆ ವಿವಿಧ ಸವಲತ್ತುಗಳನ್ನು ನೋಡಿದಾಗ ನಿರ್ದಿಷ್ಟವಾದ ಗುರಿಯನ್ನು ಹೊಂದಿ ಸ್ಥಾಪನೆಯಾಗಿರುವುದನ್ನು ನೋಡಬಹುದು ಎಂದರು.