ತಹಶೀಲ್ದಾರ್ ಪರಶುರಾಮ ಸತ್ತಿಗೇರಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ವೇಣು ಜನ ಸಂಪರ್ಕ ಸಭೆಯ ಉದ್ದೇಶ ತಿಳಿಸಿದರು.
ಗ್ರಾ.ಪಂ.ಅಧ್ಯಕ್ಷೆ ರತ್ನಮ್ಮ, ಉಪಾಧ್ಯಕ್ಷೆ ಸಂಜೀವಮ್ಮ, ಮಾಜಿ ಅಧ್ಯಕರಾದ ಬಸವರಾಜು, ಮಹಾಲಕ್ಷ್ಮಿ, ಸದಸ್ಯರಾದ ಶಿವಕುಮಾರ್, ವಸಂತಮ್ಮ, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಎಚ್.ಡಿ. ಮಹದೇವು, ಎಪಿಎಂಸಿ ಮಾಜಿ ಅಧ್ಯಕ್ಷ ದೇವರಾಜು, ಕಂದಾಯ ನಿರೀಕ್ಷಕ ಮಂಜುನಾಥ್, ಮುಖಂಡರಾದ ನಟ, ಜಕ್ಕನಹಳ್ಳಿ ಬಾಲಕೃಷ್ಣ, ಗೌಡಹಳ್ಳಿ ಪದ್ಮನಾಭ, ಸಿಪಿಐ ಬಿ.ಜಿ. ಕುಮಾರ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.