<p><strong>ಹಲಗೂರು:</strong> ಕಳೆದ ಎಂಟು ವರ್ಷಗಳ ಹಿಂದೆ ಆರಂಭವಾದ ಜನಶ್ರೇಯೋಭಿವೃದ್ಧಿ ಸಹಕಾರ ಸಂಘಕ್ಕೆ ₹15 ಲಕ್ಷ ಲಾಭ ಬಂದಿದ್ದು, ಮುಂದಿನ ದಿನಗಳಲ್ಲಿ ಸಂಘದ ಹೆಸರಿನಲ್ಲಿ ಸ್ವಂತ ನಿವೇಶನ ಖರೀದಿ ಮಾಡಲು ಕ್ರಮ ವಹಿಸಲಾಗುವುದು ಎಂದು ಸಂಘದ ಅಧ್ಯಕ್ಷ ಎಚ್.ವಿ.ಅಶ್ವಿನ್ ಕುಮಾರ್ ತಿಳಿಸಿದರು.</p>.<p>ಹಲಗೂರಿನ ಬಿ.ಕೆ.ಕಾಂಪ್ಲೆಕ್ಸ್ ನಲ್ಲಿ ಶನಿವಾರ ಆಯೋಜಿಸಿದ್ದ ಹಲಗೂರು ಜನಶ್ರೇಯೋಭಿವೃದ್ದಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಕಳೆದ ಎಂಟು ವರ್ಷಗಳ ಹಿಂದೆ ಆರಂಭವಾದ ಸಂಘವು ಉತ್ತಮ ಸಂಘಗಳಲ್ಲಿ ಒಂದು ಎಂದು ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗುರುತಿಸಿ ನಗದು ಬಹುಮಾನ ನೀಡಿ ಅಭಿನಂದಿಸಿದೆ. ಇಲ್ಲಿಯವರೆಗೆ ಸದಸ್ಯರಿಗೆ ₹2 ಕೋಟಿ ಸಾಲ ವಿತರಿಸಿದ್ದು, ₹8 ಕೋಟಿ ವ್ಯವಹಾರ ಆಗಿದೆ ಮಾಹಿತಿ ನೀಡಿದರು.</p>.<p>ಸಂಘವು ಪ್ರಸ್ತುತ ಸಾಲಿನಲ್ಲಿ ಪಿಗ್ಮಿ ಸಂಗ್ರಹಣೆಯಲ್ಲಿ ಉತ್ತಮ ಗಳಿಕೆಯಲ್ಲಿದೆ. ನಿಶ್ಚಿತ ಠೇವಣಿ ಇಡುವ ಸದಸ್ಯರಿಗೆ ಮೂರು ವರ್ಷಕ್ಕೆ ಶೇ12 ಬಡ್ಡಿ ನೀಡಲಾಗುತ್ತದೆ. ಸದಸ್ಯರು ಹೆಚ್ಚುವರಿಯಾಗಿ ಎಫ್ಡಿ ಇಡಲು ಸಹಕರಿಸಿ, ಸಂಘದ ಅಭಿವೃದ್ದಿಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.</p>.<p>ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಪುಟ್ಟಲಿಂಗೇಗೌಡ, ನಿರ್ದೇಶಕರಾದ ವಿರುಪಾಕ್ಷ, ತಮ್ಮಣ್ಣೇಗೌಡ, ಎಚ್.ಆರ್.ರವಿ, ಎಚ್.ಎನ್.ಶ್ರೀಧರ್, ಎಂ.ಎನ್.ಶೋಭಾ, ಬಿ.ಕೆ.ಸುರೇಶ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಾಗವೇಣಿ, ಸಿಬ್ಬಂದಿ ಎಂ.ಪರಮೇಶ್, ಸತೀಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲಗೂರು:</strong> ಕಳೆದ ಎಂಟು ವರ್ಷಗಳ ಹಿಂದೆ ಆರಂಭವಾದ ಜನಶ್ರೇಯೋಭಿವೃದ್ಧಿ ಸಹಕಾರ ಸಂಘಕ್ಕೆ ₹15 ಲಕ್ಷ ಲಾಭ ಬಂದಿದ್ದು, ಮುಂದಿನ ದಿನಗಳಲ್ಲಿ ಸಂಘದ ಹೆಸರಿನಲ್ಲಿ ಸ್ವಂತ ನಿವೇಶನ ಖರೀದಿ ಮಾಡಲು ಕ್ರಮ ವಹಿಸಲಾಗುವುದು ಎಂದು ಸಂಘದ ಅಧ್ಯಕ್ಷ ಎಚ್.ವಿ.ಅಶ್ವಿನ್ ಕುಮಾರ್ ತಿಳಿಸಿದರು.</p>.<p>ಹಲಗೂರಿನ ಬಿ.ಕೆ.ಕಾಂಪ್ಲೆಕ್ಸ್ ನಲ್ಲಿ ಶನಿವಾರ ಆಯೋಜಿಸಿದ್ದ ಹಲಗೂರು ಜನಶ್ರೇಯೋಭಿವೃದ್ದಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಕಳೆದ ಎಂಟು ವರ್ಷಗಳ ಹಿಂದೆ ಆರಂಭವಾದ ಸಂಘವು ಉತ್ತಮ ಸಂಘಗಳಲ್ಲಿ ಒಂದು ಎಂದು ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗುರುತಿಸಿ ನಗದು ಬಹುಮಾನ ನೀಡಿ ಅಭಿನಂದಿಸಿದೆ. ಇಲ್ಲಿಯವರೆಗೆ ಸದಸ್ಯರಿಗೆ ₹2 ಕೋಟಿ ಸಾಲ ವಿತರಿಸಿದ್ದು, ₹8 ಕೋಟಿ ವ್ಯವಹಾರ ಆಗಿದೆ ಮಾಹಿತಿ ನೀಡಿದರು.</p>.<p>ಸಂಘವು ಪ್ರಸ್ತುತ ಸಾಲಿನಲ್ಲಿ ಪಿಗ್ಮಿ ಸಂಗ್ರಹಣೆಯಲ್ಲಿ ಉತ್ತಮ ಗಳಿಕೆಯಲ್ಲಿದೆ. ನಿಶ್ಚಿತ ಠೇವಣಿ ಇಡುವ ಸದಸ್ಯರಿಗೆ ಮೂರು ವರ್ಷಕ್ಕೆ ಶೇ12 ಬಡ್ಡಿ ನೀಡಲಾಗುತ್ತದೆ. ಸದಸ್ಯರು ಹೆಚ್ಚುವರಿಯಾಗಿ ಎಫ್ಡಿ ಇಡಲು ಸಹಕರಿಸಿ, ಸಂಘದ ಅಭಿವೃದ್ದಿಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.</p>.<p>ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಪುಟ್ಟಲಿಂಗೇಗೌಡ, ನಿರ್ದೇಶಕರಾದ ವಿರುಪಾಕ್ಷ, ತಮ್ಮಣ್ಣೇಗೌಡ, ಎಚ್.ಆರ್.ರವಿ, ಎಚ್.ಎನ್.ಶ್ರೀಧರ್, ಎಂ.ಎನ್.ಶೋಭಾ, ಬಿ.ಕೆ.ಸುರೇಶ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಾಗವೇಣಿ, ಸಿಬ್ಬಂದಿ ಎಂ.ಪರಮೇಶ್, ಸತೀಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>