ಆಹಾರದಲ್ಲಿ ಹಸಿರು ಸೊಪ್ಪು, ತರಕಾರಿಗಳು, ಹಣ್ಣು, ಮೊಳಕೆ ಕಾಳು ಇರಬೇಕು. ಹಾಲು, ಮೊಟ್ಟೆ, ಮೀನು ಸೇವಿಸಬೇಕು. ದೈಹಿಕ ಕ್ಷಮತೆ ಕಾಪಾಡಿಕೊಳ್ಳಲು ನಡಿಗೆ, ಸರಳ ವ್ಯಾಯಾಮ ಮಾಡಬೇಕು. ಮನಸ್ಸಿಗೆ ಉಲ್ಲಾಸ ತರುವ, ಗಾಳಿ ಮತ್ತು ಬೆಳಕು ಚೆನ್ನಾಗಿರುವ ಪರಿಸರದಲ್ಲಿ ವಾಸಿಸಬೇಕು. ಅಗತ್ಯಕ್ಕೆ ತಕ್ಕಂತೆ ಕಬ್ಬಿಣದ ಅಂಶಯುಕ್ತ ಮಾತ್ರೆಗಳನ್ನು ಸೇವಿಸಬೇಕು. ಆಗಾಗ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.