<p><strong>ಮಂಡ್ಯ</strong>: ವರ್ತಮಾನದಲ್ಲಿ ಘಟಿಸುವ ಆವಿಷ್ಕಾರಗಳು ಮತ್ತು ಬದಲಾವಣೆಗಳು ಸಂಸ್ಕೃತಿಯನ್ನು ಆಧರಿಸಿರುತ್ತವೆ. ಉತ್ಸವಗಳು ನೆಲ ಬೇರಿನ ಸಂಸ್ಕೃತಿಯ ಪ್ರತೀಕಗಳು ಎಂದು ಲೇಖಕ ಕೊತ್ತತ್ತಿ ರಾಜು ತಿಳಿಸಿದರು.</p>.<p>ನಗರದ ಗಾಂಧಿ ಭವನದಲ್ಲಿ ಜ್ಞಾನದೀಪ ವಿದ್ಯಾಲಯ ಎಜುಕೇಷನ್ ಟ್ರಸ್ಟ್ ಹಾಗೂ ಅಗಮ್ಯ ಕಿಡ್ಸ್ ಕಾರ್ನರ್ ವತಿಯಿಂದ ಆಯೋಜಿಸಿದ್ದ ಅಗಮ್ಯ ಉತ್ಸವ-11 ಹಾಗೂ ‘ಅಗಮ್ಯ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಕ್ತದಾನ ಮಾಡುವುದೆಂದರೆ ಜೀವದಾನ ಮಾಡಿದಂತೆ. ಈವರೆಗೆ 75ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿರುವವರು ಎಂ.ಸಿ. ಲಂಕೇಶ್, ಇದು ಮನುಷ್ಯ ಪ್ರೀತಿಯ, ಮಾನವತೆಯ ಕೈಂಕರ್ಯ ಎಂದು ಹೇಳಿದರು.</p>.<p>ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕಿ ಎಲ್.ರಮ್ಯಾ, ನೆಲದನಿ ಬಳಗದ ಅಧ್ಯಕ್ಷ ಎಂ.ಸಿ. ಲಂಕೇಶ್ ಹಾಗೂ ಪತ್ರಕರ್ತ ಬಿ.ಜೆ. ಸೋಮಶೇಖರ್ ಅವರಿಗೆ ‘ಅಗಮ್ಯ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ಅಗಮ್ಯ ಕಿಡ್ಸ್ ಕಾರ್ನರ್ ಮಕ್ಕಳು ನಿರರ್ಗಳವಾಗಿ ಭಗವದ್ಗೀತೆ ಹಾಡುವ ಮೂಲಕ ಎಲ್ಲರ ಗಮನ ಸೆಳೆದರು.</p>.<p>ಅಗಮ್ಯ ಕಿಡ್ಸ್ ಕಾರ್ನರ್ ಅಧ್ಯಕ್ಷ ಬಿ.ಸೋಮಶೇಖರಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕಿ ಆರ್. ಗೀತಾ ಮಂಜು ಕನ್ನಿಕಾ ಶಿಲ್ಪ ನವೋದಯ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಎಚ್.ಆರ್.ಕನ್ನಿಕಾ ಹಾಜರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ವರ್ತಮಾನದಲ್ಲಿ ಘಟಿಸುವ ಆವಿಷ್ಕಾರಗಳು ಮತ್ತು ಬದಲಾವಣೆಗಳು ಸಂಸ್ಕೃತಿಯನ್ನು ಆಧರಿಸಿರುತ್ತವೆ. ಉತ್ಸವಗಳು ನೆಲ ಬೇರಿನ ಸಂಸ್ಕೃತಿಯ ಪ್ರತೀಕಗಳು ಎಂದು ಲೇಖಕ ಕೊತ್ತತ್ತಿ ರಾಜು ತಿಳಿಸಿದರು.</p>.<p>ನಗರದ ಗಾಂಧಿ ಭವನದಲ್ಲಿ ಜ್ಞಾನದೀಪ ವಿದ್ಯಾಲಯ ಎಜುಕೇಷನ್ ಟ್ರಸ್ಟ್ ಹಾಗೂ ಅಗಮ್ಯ ಕಿಡ್ಸ್ ಕಾರ್ನರ್ ವತಿಯಿಂದ ಆಯೋಜಿಸಿದ್ದ ಅಗಮ್ಯ ಉತ್ಸವ-11 ಹಾಗೂ ‘ಅಗಮ್ಯ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಕ್ತದಾನ ಮಾಡುವುದೆಂದರೆ ಜೀವದಾನ ಮಾಡಿದಂತೆ. ಈವರೆಗೆ 75ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿರುವವರು ಎಂ.ಸಿ. ಲಂಕೇಶ್, ಇದು ಮನುಷ್ಯ ಪ್ರೀತಿಯ, ಮಾನವತೆಯ ಕೈಂಕರ್ಯ ಎಂದು ಹೇಳಿದರು.</p>.<p>ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕಿ ಎಲ್.ರಮ್ಯಾ, ನೆಲದನಿ ಬಳಗದ ಅಧ್ಯಕ್ಷ ಎಂ.ಸಿ. ಲಂಕೇಶ್ ಹಾಗೂ ಪತ್ರಕರ್ತ ಬಿ.ಜೆ. ಸೋಮಶೇಖರ್ ಅವರಿಗೆ ‘ಅಗಮ್ಯ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ಅಗಮ್ಯ ಕಿಡ್ಸ್ ಕಾರ್ನರ್ ಮಕ್ಕಳು ನಿರರ್ಗಳವಾಗಿ ಭಗವದ್ಗೀತೆ ಹಾಡುವ ಮೂಲಕ ಎಲ್ಲರ ಗಮನ ಸೆಳೆದರು.</p>.<p>ಅಗಮ್ಯ ಕಿಡ್ಸ್ ಕಾರ್ನರ್ ಅಧ್ಯಕ್ಷ ಬಿ.ಸೋಮಶೇಖರಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕಿ ಆರ್. ಗೀತಾ ಮಂಜು ಕನ್ನಿಕಾ ಶಿಲ್ಪ ನವೋದಯ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಎಚ್.ಆರ್.ಕನ್ನಿಕಾ ಹಾಜರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>