<p><strong>ಸಂತೇಬಾಚಹಳ್ಳಿ</strong>: ಅಘಲಯ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಎ.ಎನ್ ಜಾನಕೀರಾಂ ಹಾಗೂ ಉಪಾಧ್ಯಕ್ಷರಾಗಿ ಜಯಶೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಮಂಡಳಿಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಇಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಹಕಾರ ಸಂಘದ ಉಪನಿಬಂಧಕ ಭರತ್ ಕುಮಾರ್ ಘೋಷಿಸಿದರು.</p>.<p>‘ರೈತರಿಗೆ ಅನುಕೂಲವಾಗುವಂತ ಯೋಜನೆಗಳ ಬಗ್ಗೆ ಅರಿವು ಮೂಡಿಸಿ, ರೈತರಿಗೆ ಹಾಗೂ ಸಂಘ ಸಂಸ್ಥೆಗಳಿಗೆ ನೆರವಾಗುವಂತಹ ಯೋಜನೆಯನ್ನು ನೀಡುತ್ತೇವೆ’ ಎಂದು ಜಾನಕಿರಾಮು ಭರವಸೆ ನೀಡಿದರು.</p>.<p>ಸಂಘದ ನಿರ್ದೇಶಕರಾದ ನವೀನಕುಮಾರ್,ಮಂಜೇಗೌಡ, ಮಹದೇವ್, ರಾಮೇಗೌಡ, ಕೃಷ್ಣೇಗೌಡ, ಅನಿಲಕುಮಾರ್, ಶ್ವೇತಾ, ಯೋಗೇಶ್, ಹಿರಿಯ ಮುಖಂಡ ಧರಣಿ ಶಿವನಜೇಗೌಡ, ಕೆ.ಸಿದ್ದೇಗೌಡ, ಎ.ಎಲ್ ನಂಜಪ್ಪ, ಎ.ಬಿ ಲೋಕೇಶ್, ಎ.ಎನ್ ಯೋಗೇಶ್, ಎ.ಎಸ್.ಕುಮಾರ್, ಮುರುಳೀಧರ್, ಎ.ಎಸ್.ಗಣೇಶ್, ಎ.ಎಸ್.ಶ್ರೀಧರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೇಬಾಚಹಳ್ಳಿ</strong>: ಅಘಲಯ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಎ.ಎನ್ ಜಾನಕೀರಾಂ ಹಾಗೂ ಉಪಾಧ್ಯಕ್ಷರಾಗಿ ಜಯಶೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಮಂಡಳಿಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಇಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಹಕಾರ ಸಂಘದ ಉಪನಿಬಂಧಕ ಭರತ್ ಕುಮಾರ್ ಘೋಷಿಸಿದರು.</p>.<p>‘ರೈತರಿಗೆ ಅನುಕೂಲವಾಗುವಂತ ಯೋಜನೆಗಳ ಬಗ್ಗೆ ಅರಿವು ಮೂಡಿಸಿ, ರೈತರಿಗೆ ಹಾಗೂ ಸಂಘ ಸಂಸ್ಥೆಗಳಿಗೆ ನೆರವಾಗುವಂತಹ ಯೋಜನೆಯನ್ನು ನೀಡುತ್ತೇವೆ’ ಎಂದು ಜಾನಕಿರಾಮು ಭರವಸೆ ನೀಡಿದರು.</p>.<p>ಸಂಘದ ನಿರ್ದೇಶಕರಾದ ನವೀನಕುಮಾರ್,ಮಂಜೇಗೌಡ, ಮಹದೇವ್, ರಾಮೇಗೌಡ, ಕೃಷ್ಣೇಗೌಡ, ಅನಿಲಕುಮಾರ್, ಶ್ವೇತಾ, ಯೋಗೇಶ್, ಹಿರಿಯ ಮುಖಂಡ ಧರಣಿ ಶಿವನಜೇಗೌಡ, ಕೆ.ಸಿದ್ದೇಗೌಡ, ಎ.ಎಲ್ ನಂಜಪ್ಪ, ಎ.ಬಿ ಲೋಕೇಶ್, ಎ.ಎನ್ ಯೋಗೇಶ್, ಎ.ಎಸ್.ಕುಮಾರ್, ಮುರುಳೀಧರ್, ಎ.ಎಸ್.ಗಣೇಶ್, ಎ.ಎಸ್.ಶ್ರೀಧರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>