<p><strong>ಮಂಡ್ಯ:</strong> ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಏರ್ಪಡಿಸಿದ್ದ ‘ಕೃಷಿ ಯಂತ್ರೋಪಕರಣ ಮತ್ತು ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆ ಮೇಳ– 2026’ ಕಾರ್ಯಕ್ರಮಕ್ಕೆ ರೈತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. </p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಕೆ.ಸಿ. ನಾರಾಯಣಸ್ವಾಮಿ, ‘ಅಭಿವೃದ್ಧಿ ಹೊಂದಿದ ಪಶ್ಚಿಮ ರಾಷ್ಟ್ರಗಳಲ್ಲಿ ಕೃಷಿಯಲ್ಲಿ ಶೇ 80ರಿಂದ 90ರಷ್ಟು ಯಂತ್ರೋಪಕರಣಗಳ ಬಳಕೆಯಾಗುತ್ತಿದೆ. ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ಶೇ 40 ರಿಂದ 50ರಷ್ಟು ಬಳಕೆಯಲ್ಲಿದೆ. ಕರ್ನಾಟಕ ರಾಜ್ಯದ ರೈತರು ಸಹ ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಯಂತ್ರೋಪಕರಣಗಳನ್ನು ಬಳಸುವ ಮೂಲಕ ಉತ್ಪಾದಕತೆ ಮತ್ತು ಆರ್ಥಿಕ ಮಟ್ಟವನ್ನು ಹೆಚ್ಚಿಸಿಕೊಳ್ಳಬೇಕೆಂದು ಹೇಳಿದರು.</p>.<p>ಇಂದಿನ ದಿನಗಳಲ್ಲಿ ಕೃಷಿ ಕಾರ್ಮಿಕರ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಯಾಂತ್ರೀಕರಣ ಅತ್ಯಂತ ಅಗತ್ಯವಾಗಿದೆ. ರೈತರು ಆಧುನಿಕ ತಂತ್ರಜ್ಞಾನ ಹಾಗೂ ಯಂತ್ರೋಪಕರಣಗಳನ್ನು ಅಳವಡಿಸಿಕೊಂಡು ಕೃಷಿಯನ್ನು ಹೆಚ್ಚು ಲಾಭದಾಯಕವಾಗಿಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು.</p>.<p>ವಿಸ್ತರಣಾ ನಿರ್ದೇಶಕ ಡಾ.ಸಿ. ರಾಮಚಂದ್ರ ಮಾತನಾಡಿ, ‘ರೈತರಿಗೆ ಕೈಗೆಟಕುವ ದರದಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು. ಜೊತೆಗೆ ರೈತರಿಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ ಬಳಕೆ ಕುರಿತು ವಿಶ್ವವಿದ್ಯಾಲಯದಿಂದ ಹೆಚ್ಚಿನ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಬೆಂಗಳೂರು ಕೃಷಿ ವಿವಿ ಸಂಶೋಧನಾ ನಿರ್ದೇಶಕ ಎಚ್. ಎಚ್. ಶಿವರಾಮ, ಮಂಡ್ಯ ಕೃಷಿ ವಿವಿ ವಿಸ್ತರಣಾ ನಿರ್ದೇಶಕ ಸಿ. ರಾಮಚಂದ್ರ, ಸಂಶೋಧನಾ ನಿರ್ದೇಶಕ ದೇವಗಿರಿ, ಶಿಕ್ಷಣ ನಿರ್ದೇಶಕ ಎನ್.ಶಿವಕುಮಾರ್, ಚಾಮರಾಜನಗರ ಕೃಷಿ ವಿವಿ ವಿಶೇಷಾಧಿಕಾರಿ ದೊರೆಸ್ವಾಮಿ, ವಿಜ್ಞಾನಿ ಕರೋಲಿನಿ, ಸಹ ಸಂಶೋಧನಾ ನಿರ್ದೇಶಕ ಬಸವರಾಜು, ಪ್ರಾಯೋಜನಾ ಮುಖ್ಯಸ್ಥೆ ಎಂ.ಎಸ್.ಶ್ರೀದೇವಿ ಪಾಲ್ಗೊಂಡಿದ್ದರು. </p>.<p>ಕಾರ್ಯಕ್ರಮದಲ್ಲಿ ಸುಮಾರು 500ಕ್ಕೂ ಹೆಚ್ಚು ರೈತರು ಭಾಗವಹಿಸಿ ವಿವಿಧ ಕೃಷಿ ಯಂತ್ರೋಪಕರಣಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಜೊತೆಗೆ ವಿಶ್ವವಿದ್ಯಾಲಯದ ಅಧಿಕಾರಿಗಳು, ಪ್ರಾಧ್ಯಾಪಕರು, ವಿಜ್ಞಾನಿಗಳು ಹಾಗೂ ವಿದ್ಯಾರ್ಥಿಗಳು ಸಹ ಕಾರ್ಯಕ್ರಮದಲ್ಲಿ ಹಾಜರಿದ್ದರು. </p>.<div><blockquote>ಕೃಷಿ ಯಂತ್ರೋಪಕರಣಗಳ ದುರಸ್ತಿ ವಿಧಾನ ಸುರಕ್ಷಿತ ಬಳಕೆ ಕುರಿತು ತರಬೇತಿ ನೀಡುವ ಸರ್ಟಿಫಿಕೇಟ್ ಕೋರ್ಸ್ಗಳನ್ನು ಮುಂದಿನ ವರ್ಷಗಳಲ್ಲಿ ಆರಂಭಿಸಲು ಯೋಜಿಸಲಾಗಿದೆ.</blockquote><span class="attribution">ಕೆ.ಸಿ. ನಾರಾಯಣಸ್ವಾಮಿ ಕುಲಪತಿ ಮಂಡ್ಯ ಕೃಷಿ ವಿವಿ </span></div>.<p>ಮೇಳದಲ್ಲಿ 50 ಮಳಿಗೆಗಳು ಈ ಮೇಳದಲ್ಲಿ 50ಕ್ಕೂ ಹೆಚ್ಚು ಕೃಷಿ ಯಂತ್ರೋಪಕರಣಗಳಿಗೆ ಸಂಬಂಧಿಸಿದ ಮಳಿಗೆಗಳನ್ನು ಏರ್ಪಡಿಸಲಾಗಿತ್ತು. ವಿವಿಧ ಕಂಪನಿಗಳು ಹಾಗೂ ಸಂಸ್ಥೆಗಳು ತಮ್ಮ ಆಧುನಿಕ ಕೃಷಿ ಯಂತ್ರೋಪಕರಣಗಳನ್ನು ಪ್ರದರ್ಶಿಸಿದ್ದವು. ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳು ರೈತರಿಗೆ ಕೃಷಿ ಯಂತ್ರೋಪಕರಣಗಳ ಬಳಕೆ ಅವುಗಳ ನಿರ್ವಹಣೆ ಕಾರ್ಯಕ್ಷಮತೆ ಮತ್ತು ಉತ್ಪಾದಕತೆ ಹೆಚ್ಚಿಸುವಲ್ಲಿ ಅವುಗಳ ಪಾತ್ರದ ಬಗ್ಗೆ ವಿವರವಾದ ಮಾಹಿತಿ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಏರ್ಪಡಿಸಿದ್ದ ‘ಕೃಷಿ ಯಂತ್ರೋಪಕರಣ ಮತ್ತು ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆ ಮೇಳ– 2026’ ಕಾರ್ಯಕ್ರಮಕ್ಕೆ ರೈತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. </p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಕೆ.ಸಿ. ನಾರಾಯಣಸ್ವಾಮಿ, ‘ಅಭಿವೃದ್ಧಿ ಹೊಂದಿದ ಪಶ್ಚಿಮ ರಾಷ್ಟ್ರಗಳಲ್ಲಿ ಕೃಷಿಯಲ್ಲಿ ಶೇ 80ರಿಂದ 90ರಷ್ಟು ಯಂತ್ರೋಪಕರಣಗಳ ಬಳಕೆಯಾಗುತ್ತಿದೆ. ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ಶೇ 40 ರಿಂದ 50ರಷ್ಟು ಬಳಕೆಯಲ್ಲಿದೆ. ಕರ್ನಾಟಕ ರಾಜ್ಯದ ರೈತರು ಸಹ ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಯಂತ್ರೋಪಕರಣಗಳನ್ನು ಬಳಸುವ ಮೂಲಕ ಉತ್ಪಾದಕತೆ ಮತ್ತು ಆರ್ಥಿಕ ಮಟ್ಟವನ್ನು ಹೆಚ್ಚಿಸಿಕೊಳ್ಳಬೇಕೆಂದು ಹೇಳಿದರು.</p>.<p>ಇಂದಿನ ದಿನಗಳಲ್ಲಿ ಕೃಷಿ ಕಾರ್ಮಿಕರ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಯಾಂತ್ರೀಕರಣ ಅತ್ಯಂತ ಅಗತ್ಯವಾಗಿದೆ. ರೈತರು ಆಧುನಿಕ ತಂತ್ರಜ್ಞಾನ ಹಾಗೂ ಯಂತ್ರೋಪಕರಣಗಳನ್ನು ಅಳವಡಿಸಿಕೊಂಡು ಕೃಷಿಯನ್ನು ಹೆಚ್ಚು ಲಾಭದಾಯಕವಾಗಿಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು.</p>.<p>ವಿಸ್ತರಣಾ ನಿರ್ದೇಶಕ ಡಾ.ಸಿ. ರಾಮಚಂದ್ರ ಮಾತನಾಡಿ, ‘ರೈತರಿಗೆ ಕೈಗೆಟಕುವ ದರದಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು. ಜೊತೆಗೆ ರೈತರಿಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ ಬಳಕೆ ಕುರಿತು ವಿಶ್ವವಿದ್ಯಾಲಯದಿಂದ ಹೆಚ್ಚಿನ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಬೆಂಗಳೂರು ಕೃಷಿ ವಿವಿ ಸಂಶೋಧನಾ ನಿರ್ದೇಶಕ ಎಚ್. ಎಚ್. ಶಿವರಾಮ, ಮಂಡ್ಯ ಕೃಷಿ ವಿವಿ ವಿಸ್ತರಣಾ ನಿರ್ದೇಶಕ ಸಿ. ರಾಮಚಂದ್ರ, ಸಂಶೋಧನಾ ನಿರ್ದೇಶಕ ದೇವಗಿರಿ, ಶಿಕ್ಷಣ ನಿರ್ದೇಶಕ ಎನ್.ಶಿವಕುಮಾರ್, ಚಾಮರಾಜನಗರ ಕೃಷಿ ವಿವಿ ವಿಶೇಷಾಧಿಕಾರಿ ದೊರೆಸ್ವಾಮಿ, ವಿಜ್ಞಾನಿ ಕರೋಲಿನಿ, ಸಹ ಸಂಶೋಧನಾ ನಿರ್ದೇಶಕ ಬಸವರಾಜು, ಪ್ರಾಯೋಜನಾ ಮುಖ್ಯಸ್ಥೆ ಎಂ.ಎಸ್.ಶ್ರೀದೇವಿ ಪಾಲ್ಗೊಂಡಿದ್ದರು. </p>.<p>ಕಾರ್ಯಕ್ರಮದಲ್ಲಿ ಸುಮಾರು 500ಕ್ಕೂ ಹೆಚ್ಚು ರೈತರು ಭಾಗವಹಿಸಿ ವಿವಿಧ ಕೃಷಿ ಯಂತ್ರೋಪಕರಣಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಜೊತೆಗೆ ವಿಶ್ವವಿದ್ಯಾಲಯದ ಅಧಿಕಾರಿಗಳು, ಪ್ರಾಧ್ಯಾಪಕರು, ವಿಜ್ಞಾನಿಗಳು ಹಾಗೂ ವಿದ್ಯಾರ್ಥಿಗಳು ಸಹ ಕಾರ್ಯಕ್ರಮದಲ್ಲಿ ಹಾಜರಿದ್ದರು. </p>.<div><blockquote>ಕೃಷಿ ಯಂತ್ರೋಪಕರಣಗಳ ದುರಸ್ತಿ ವಿಧಾನ ಸುರಕ್ಷಿತ ಬಳಕೆ ಕುರಿತು ತರಬೇತಿ ನೀಡುವ ಸರ್ಟಿಫಿಕೇಟ್ ಕೋರ್ಸ್ಗಳನ್ನು ಮುಂದಿನ ವರ್ಷಗಳಲ್ಲಿ ಆರಂಭಿಸಲು ಯೋಜಿಸಲಾಗಿದೆ.</blockquote><span class="attribution">ಕೆ.ಸಿ. ನಾರಾಯಣಸ್ವಾಮಿ ಕುಲಪತಿ ಮಂಡ್ಯ ಕೃಷಿ ವಿವಿ </span></div>.<p>ಮೇಳದಲ್ಲಿ 50 ಮಳಿಗೆಗಳು ಈ ಮೇಳದಲ್ಲಿ 50ಕ್ಕೂ ಹೆಚ್ಚು ಕೃಷಿ ಯಂತ್ರೋಪಕರಣಗಳಿಗೆ ಸಂಬಂಧಿಸಿದ ಮಳಿಗೆಗಳನ್ನು ಏರ್ಪಡಿಸಲಾಗಿತ್ತು. ವಿವಿಧ ಕಂಪನಿಗಳು ಹಾಗೂ ಸಂಸ್ಥೆಗಳು ತಮ್ಮ ಆಧುನಿಕ ಕೃಷಿ ಯಂತ್ರೋಪಕರಣಗಳನ್ನು ಪ್ರದರ್ಶಿಸಿದ್ದವು. ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳು ರೈತರಿಗೆ ಕೃಷಿ ಯಂತ್ರೋಪಕರಣಗಳ ಬಳಕೆ ಅವುಗಳ ನಿರ್ವಹಣೆ ಕಾರ್ಯಕ್ಷಮತೆ ಮತ್ತು ಉತ್ಪಾದಕತೆ ಹೆಚ್ಚಿಸುವಲ್ಲಿ ಅವುಗಳ ಪಾತ್ರದ ಬಗ್ಗೆ ವಿವರವಾದ ಮಾಹಿತಿ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>