<p><strong>ಮಂಡ್ಯ:</strong> ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಅವುಗಳು ಮತ್ತಷ್ಟು ಪರಿಣಾಮಕಾರಿಯಾಗಿ ರೈತರ ಬೇಸಾಯಕ್ಕೆ ತಕ್ಕಂತೆ ಕೆಲಸ ಮಾಡಬೇಕು ಎಂದು ಶಾಸಕ ಪಿ.ರವಿಕುಮಾರ್ಗೌಡ ಸಲಹೆ ನೀಡಿದರು.</p>.<p>ತಾಲ್ಲೂಕಿನ ಹುನುಗನಹಳ್ಳಿ ಗ್ರಾಮದಲ್ಲಿ ಮುತ್ತೇಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಡೆದ ಉಪಗೋದಾಮು ಕಟ್ಟಡದ ಉದ್ಘಾಟನೆ ಮತ್ತು ನಾಮ ಫಲಕ ಅನಾವರಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸರ್ಕಾರವು ರೈತರ ಪರವಾಗಿ ಕೆಲಸ ಮಾಡುತ್ತಿದೆ. ಹುನಗನಹಳ್ಳಿ ಗ್ರಾಮವು 34 ಕಿ.ಮೀ. ದೂರದಲ್ಲಿದ್ದು, ಈ ಗ್ರಾಮಕ್ಕೂ ಅಗತ್ಯವಾಗಿ ಅಭಿವೃದ್ಧಿ ಯೋಜನೆ ಮಾಡಿಸಲಾಗುವುದು. ಬಸರಾಳು ಗ್ರಾಮದಿಂದ ಮುತ್ತೇಗೆರೆ ಗ್ರಾಮದ ರಸ್ತೆಯು ಸುಮಾರು ₹10 ಕೋಟಿ ವೆಚ್ಚದ ಕಾಮಗಾರಿ ನಡೆಯುತ್ತಿದೆ. ಒಟ್ಟಾರೆ ಮುಖ್ಯಮಂತ್ರಿ ಅನುದಾನದಡಿ ವಿಶೇಷ ಯೋಜನೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮ ಮಾಡಲಾಗುವುದು. ಜೊತೆಗೆ ಎಲ್ಲ ಪಕ್ಷದವರ ಸಹಕಾರದಿಂದಲೂ ಅಭಿವೃದ್ಧಿ ಮಾಡಲು ಮುಂದಾಗುತ್ತೇವೆ’ ಎಂದು ಭರವಸೆ ನೀಡಿದರು.</p>.<p>‘ಹೇಮಾವತಿ ಕೊನೆಹಂತದ ವ್ಯಾಪ್ತಿಗೆ ಈ ಗ್ರಾಮಗಳು ಬರುವುದರಿಂದ ನೀರು ಬರಲ್ಲ ಎಂಬುವ ಮಾತು ಕೇಳಿ ಬರುತ್ತದೆ. ಇದರ ಆಲೋಚನೆ ಮಾಡಿದ ಮುಖ್ಯಮಂತ್ರಿ ಅವರು ಬಸರಾಳು, ಹೊಣಕೆರೆ, ದೇವಲಾಪುರ ಗ್ರಾಮ ವ್ಯಾಪ್ತಿಯ ಕೆರೆಗಳಿಗೆ ಶ್ರೀರಂಗಪಟ್ಟಣದಿಂದ ನೀರುಣಿಸಲು ₹1,300 ಕೋಟಿ ಡಿಪಿಆರ್ ರೆಡಿಯಾಗಿದೆ. ಇನ್ನೆರಡು ತಿಂಗಳಲ್ಲಿ ಸದನದಲ್ಲಿಟ್ಟು ಚರ್ಚೆ ನಡೆಸಿ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ, ಒಟ್ಟಾರೆ ಬಸರಾಳು ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡುತ್ತೇವೆ’ ಎಂದು ವಿವರಿಸಿದರು.</p>.<p>ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಚ್.ಅಪ್ಪಾಜಿ ಮಾತನಾಡಿ, ‘ಹುನಗನಹಳ್ಳಿ ಗೋದಾಮು ಕಟ್ಟಡ ನಿರ್ಮಾಣಕ್ಕೆ ಶಾಸಕ ಪಿ.ರವಿಕುಮಾರ್ಗೌಡ ಅವರು ₹10, ಸಂಸದೆ ಸುಮಲತಾ ಅಂಬರೀಷ್ ಅವರ ಅಧಿಕಾರದ ಅವಧಿಯಲ್ಲಿ ₹5 ಲಕ್ಷ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ₹2.50 ಲಕ್ಷ ನೀಡಿದ್ದಾರೆ. ಮತ್ತಷ್ಟು ಅನುದಾನಕ್ಕಾಗಿ ಶಾಸಕರ ಬಳಿ ಮನವಿ ಮಾಡಿದ್ದೇವೆ ಅದನ್ನು ನೀಡುವುದಾಗಿ ಹೇಳಿದ್ದಾರೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಅಶೋಕ್, ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಕೆ.ರಾಧಕೃಷ್ಣ, ಮುಡಾ ಅಧ್ಯಕ್ಷ ನಯೀಮ್, ಮುಖಂಡರಾದ ಸತೀಶ್, ಶೈಲೇಶ್, ಮಂಜೇಗೌಡ, ಲಕ್ಷ್ಮಿ, ಸುಧಾ, ಕೃಷ್ಣೇಗೌಡ ಭಾವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಅವುಗಳು ಮತ್ತಷ್ಟು ಪರಿಣಾಮಕಾರಿಯಾಗಿ ರೈತರ ಬೇಸಾಯಕ್ಕೆ ತಕ್ಕಂತೆ ಕೆಲಸ ಮಾಡಬೇಕು ಎಂದು ಶಾಸಕ ಪಿ.ರವಿಕುಮಾರ್ಗೌಡ ಸಲಹೆ ನೀಡಿದರು.</p>.<p>ತಾಲ್ಲೂಕಿನ ಹುನುಗನಹಳ್ಳಿ ಗ್ರಾಮದಲ್ಲಿ ಮುತ್ತೇಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಡೆದ ಉಪಗೋದಾಮು ಕಟ್ಟಡದ ಉದ್ಘಾಟನೆ ಮತ್ತು ನಾಮ ಫಲಕ ಅನಾವರಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸರ್ಕಾರವು ರೈತರ ಪರವಾಗಿ ಕೆಲಸ ಮಾಡುತ್ತಿದೆ. ಹುನಗನಹಳ್ಳಿ ಗ್ರಾಮವು 34 ಕಿ.ಮೀ. ದೂರದಲ್ಲಿದ್ದು, ಈ ಗ್ರಾಮಕ್ಕೂ ಅಗತ್ಯವಾಗಿ ಅಭಿವೃದ್ಧಿ ಯೋಜನೆ ಮಾಡಿಸಲಾಗುವುದು. ಬಸರಾಳು ಗ್ರಾಮದಿಂದ ಮುತ್ತೇಗೆರೆ ಗ್ರಾಮದ ರಸ್ತೆಯು ಸುಮಾರು ₹10 ಕೋಟಿ ವೆಚ್ಚದ ಕಾಮಗಾರಿ ನಡೆಯುತ್ತಿದೆ. ಒಟ್ಟಾರೆ ಮುಖ್ಯಮಂತ್ರಿ ಅನುದಾನದಡಿ ವಿಶೇಷ ಯೋಜನೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮ ಮಾಡಲಾಗುವುದು. ಜೊತೆಗೆ ಎಲ್ಲ ಪಕ್ಷದವರ ಸಹಕಾರದಿಂದಲೂ ಅಭಿವೃದ್ಧಿ ಮಾಡಲು ಮುಂದಾಗುತ್ತೇವೆ’ ಎಂದು ಭರವಸೆ ನೀಡಿದರು.</p>.<p>‘ಹೇಮಾವತಿ ಕೊನೆಹಂತದ ವ್ಯಾಪ್ತಿಗೆ ಈ ಗ್ರಾಮಗಳು ಬರುವುದರಿಂದ ನೀರು ಬರಲ್ಲ ಎಂಬುವ ಮಾತು ಕೇಳಿ ಬರುತ್ತದೆ. ಇದರ ಆಲೋಚನೆ ಮಾಡಿದ ಮುಖ್ಯಮಂತ್ರಿ ಅವರು ಬಸರಾಳು, ಹೊಣಕೆರೆ, ದೇವಲಾಪುರ ಗ್ರಾಮ ವ್ಯಾಪ್ತಿಯ ಕೆರೆಗಳಿಗೆ ಶ್ರೀರಂಗಪಟ್ಟಣದಿಂದ ನೀರುಣಿಸಲು ₹1,300 ಕೋಟಿ ಡಿಪಿಆರ್ ರೆಡಿಯಾಗಿದೆ. ಇನ್ನೆರಡು ತಿಂಗಳಲ್ಲಿ ಸದನದಲ್ಲಿಟ್ಟು ಚರ್ಚೆ ನಡೆಸಿ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ, ಒಟ್ಟಾರೆ ಬಸರಾಳು ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡುತ್ತೇವೆ’ ಎಂದು ವಿವರಿಸಿದರು.</p>.<p>ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಚ್.ಅಪ್ಪಾಜಿ ಮಾತನಾಡಿ, ‘ಹುನಗನಹಳ್ಳಿ ಗೋದಾಮು ಕಟ್ಟಡ ನಿರ್ಮಾಣಕ್ಕೆ ಶಾಸಕ ಪಿ.ರವಿಕುಮಾರ್ಗೌಡ ಅವರು ₹10, ಸಂಸದೆ ಸುಮಲತಾ ಅಂಬರೀಷ್ ಅವರ ಅಧಿಕಾರದ ಅವಧಿಯಲ್ಲಿ ₹5 ಲಕ್ಷ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ₹2.50 ಲಕ್ಷ ನೀಡಿದ್ದಾರೆ. ಮತ್ತಷ್ಟು ಅನುದಾನಕ್ಕಾಗಿ ಶಾಸಕರ ಬಳಿ ಮನವಿ ಮಾಡಿದ್ದೇವೆ ಅದನ್ನು ನೀಡುವುದಾಗಿ ಹೇಳಿದ್ದಾರೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಅಶೋಕ್, ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಕೆ.ರಾಧಕೃಷ್ಣ, ಮುಡಾ ಅಧ್ಯಕ್ಷ ನಯೀಮ್, ಮುಖಂಡರಾದ ಸತೀಶ್, ಶೈಲೇಶ್, ಮಂಜೇಗೌಡ, ಲಕ್ಷ್ಮಿ, ಸುಧಾ, ಕೃಷ್ಣೇಗೌಡ ಭಾವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>